ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಕ್ಕಳ ಕನಸು ಪೂರ್ಣಗೊಳಿಸುವ ಯತ್ನ: ಪೊಲೀಸ್ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿದ ಮಕ್ಕಳು: 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಣೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್‌, ಜೀವನ್‌ ಕುಮಾರ್‌, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್‌ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿ 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

ಪೊಲೀಸ್ ಆಯುಕ್ತರ ಜೊತೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಅನಾವರಣಗೊಳಿಸಿದರು.

ಇದು ವಿಶ್ವ ಕ್ಯಾನ್ಸರ್ ದಿನವಾದ ಮಂಗಳವಾರ(ಫೆ.4) ಕಿಡ್ಸ್ ವಾರಿಯರ್ಸ್ (ಪೀಡಿಯಾಟ್ರಿಕ್ ಕ್ಯಾನ್ಸರ್ ಮಕ್ಕಳ) ಕನಸುಗಳನ್ನು ನನಸಾಗಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಆಯೋಜಿಸಿದ ಮಾನವೀಯ ಕಾರ್ಯಕ್ರಮವಾಗಿದೆ.

ಕನಸುಗಳನ್ನು ನಿಜವಾಗಿಸಲು ಒಂದು ಹೆಜ್ಜೆ! ವಿಶ್ವ ಕ್ಯಾನ್ಸರ್ ದಿನದಂದು, ಬೆಂಗಳೂರು ನಗರ ಪೊಲೀಸ್ ಇಲಾಖೆಯು ಪರಿಹಾರ್ ಮತ್ತು ಕಿಡ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲೊಜಿ ಸಹಯೋಗದಲ್ಲಿ ಕಿಡ್ಸ್‌ ವಾರಿಯರ್ಸ್‌ (ಪೀಡಿಯಾಟ್ರಿಕ್ ಕ್ಯಾನ್ಸರ್‌ ಮಕ್ಕಳ) ಕನಸುಗಳ ಪೂರ್ಣಗೊಳಿಸಲು ಗೌರವಾನುಭವಿಗಳಾಗಿದ್ದೇವೆ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಾಶ್ರೀ (12 ರಿಂದ 14 ವರ್ಷದ ಮಕ್ಕಳು) ಅವರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ “ಒಂದು ದಿನದ ಪೊಲೀಸ್ ಅಧಿಕಾರಿ” ಆಗಿ ಸೇವೆ ಸಲ್ಲಿಸುವ ಅಪರೂಪದ ಅನುಭವ ಪಡೆದಿದ್ದಾರೆ. ಈ ಹೃದಯಸ್ಪರ್ಶಿ ಕಾರ್ಯಕ್ರಮವು ಈ ಧೈರ್ಯಶಾಲಿ ಮಕ್ಕಳಿಗೆ ಸ್ಫೂರ್ತಿ ನೀಡಲು ಮತ್ತು ಸಂತೋಷ ತರಲು ಉದ್ದೇಶಿತವಾಗಿದೆ. ಇದರೊಂದಿಗೆ ಟ್ರಾಫಿಕ್ ಪೊಲೀಸ್ ಮ್ಯೂಸಿಯಂ ಭೇಟಿಯ ಮೂಲಕ ರಸ್ತೆ ಸುರಕ್ಷತೆ ಮತ್ತು ಜನರ ಪ್ರಾಣ ಉಳಿಸಲು ಬೆಂಗಳೂರು ಪೊಲೀಸರು ಹೇಗೆ ಕೆಲಸ ನಿರ್ವಹಿಸುತ್ತಾರೆ ಎಂಬುವುದನ್ನು ಅರ್ಥೈಸುವುದು ಈ ಕಾರ್ಯದ ಪ್ರಮುಖ ಭಾಗವಾಗಿತ್ತು ಎಂದು ಹೇಳಿದ್ದಾರೆ.

ನಂತರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಇವರು ಸಹ ಭಾಗವಹಿಸಿದ್ದರು.

ಗಮನ ಬೇರೆಡೆಗೆ ಸೆಳೆಯುವ ತಂತ್ರದ ಮೂಲಕ ಚಿನ್ನಾಭರಣ ಮತ್ತು ನಗದು ಕಳ್ಳತನದಲ್ಲಿ ತೊಡಗಿದ್ದ ಇಬ್ಬರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಾಹನದ ಟೈರ್ ಪಂಚರ್ ಆಗಿದೆ ಎಂದು ಸುಳ್ಳು ಎಚ್ಚರಿಕೆ ನೀಡಿ ಸಂತ್ರಸ್ತರನ್ನು ವಂಚಿಸಿ, ಈ ಸಂದರ್ಭವನ್ನು ಬಳಸಿಕೊಂಡು ಸಂತ್ರಸ್ತರ ವಾಹನವನ್ನು ಒಡೆದು ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಸುಮಾರು ₹12 ಲಕ್ಷ ಮೌಲ್ಯದ 101 ಗ್ರಾಂ ಚಿನ್ನಾಭರಣ ಮತ್ತು ₹4.50 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ನಗರ ಪೊಲೀಸರು ಇಂತಹ ವಂಚನೆಗಳ ವಿರುದ್ಧ ಜಾಗರೂಕರಾಗಿರಲು ಮತ್ತು ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣವೇ ವರದಿ ಮಾಡಲು ನಾಗರಿಕರಿಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಮನೆಗೆಲಸದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಕಳವು ಪ್ರಕರಣದಲ್ಲಿ ಸುಮಾರು ₹22.5 ಲಕ್ಷ ಮೌಲ್ಯದ 273 ಗ್ರಾಂ ಚಿನ್ನಾಭರಣ ಮತ್ತು ₹75,200 ನಗದನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಮನೆಗೆಲಸದವರನ್ನು ನೇಮಿಸಿಕೊಳ್ಳುವಾಗ ಎಚ್ಚರ ವಹಿಸಬೇಕೆಂದು ಬೆಂಗಳೂರು ನಗರ ಪೊಲೀಸರು ನಾಗರಿಕರಿಗೆ ಮನವಿ ಮಾಡಿದ್ದು, ಸಂಪೂರ್ಣ ಹಿನ್ನೆಲೆ ಪರಿಶೀಲನೆ ಮೂಲಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದ್ದಾರೆ ಎಂದರು.

ಮಹದೇವಪುರ ಪೊಲೀಸರು ಬೆಂಗಳೂರಿನಾದ್ಯಂತ ನಡೆದ ಅನೇಕ ಮೊಬೈಲ್ ದೋಚಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಒಟ್ಟು ₹ 30,40,000 ಮೌಲ್ಯದ 93 ಮೊಬೈಲ್‌ಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ರಸ್ತೆಯಲ್ಲಿ ಎಚ್ಚರದಿಂದಿರಿ ಮತ್ತು ನಿಮ್ಮ ವಸ್ತುಗಳನ್ನು ಸುರಕ್ಷಿತವಾಗಿಡಿ ಎಂದು ಹೇಳಿದರು.

ಬಾಗಲಗುಂಟೆ ಪೊಲೀಸ್ ಠಾಣೆಯವರು ಹಲವಾರು ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು ₹4 ಲಕ್ಷ ಮೌಲ್ಯದ 8 ಕಳ್ಳತನದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನವನ್ನು ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ನಾಗರಿಕರು ಪಾರ್ಕಿಂಗ್ ಮಾಡುವಾಗ ತಮ್ಮ ವಾಹನಗಳನ್ನು ಸುರಕ್ಷಿತವಾಗಿ ಲಾಕ್ ಮಾಡಬೇಕೆಂದು ವಿನಂತಿಸುತ್ತೇವೆ ಎಂದು ತಿಳಿಸಿದರು.

ಮಡಿವಾಳ ಪೊಲೀಸ್ ಠಾಣೆ ಅಧಿಕಾರಿಗಳಿಂದ ಅಂತರರಾಜ್ಯ ಕಳ್ಳನ ಬಂಧನ! ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಹಾಗೂ ತೆಲಂಗಾಣ ಸೇರಿದಂತೆ 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದು ಮನೆ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಒಟ್ಟು ₹12.25 ಲಕ್ಷ ಮೌಲ್ಯದ 181 ಗ್ರಾಂ ಚಿನ್ನ ಮತ್ತು 333 ಗ್ರಾಂ ಬೆಳ್ಳಿಯನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮತ್ತು ಸಹಚರನು ತಪ್ಪೊಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 hour ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

1 hour ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

3 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

15 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

16 hours ago