ಕ್ಯಾನ್ಸರ್ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್ ಸಮವಸ್ತ್ರ ಧರಿಸಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ 1 ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.
ಪೊಲೀಸ್ ಆಯುಕ್ತರ ಜೊತೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಅನಾವರಣಗೊಳಿಸಿದರು.
ಇದು ವಿಶ್ವ ಕ್ಯಾನ್ಸರ್ ದಿನವಾದ ಮಂಗಳವಾರ(ಫೆ.4) ಕಿಡ್ಸ್ ವಾರಿಯರ್ಸ್ (ಪೀಡಿಯಾಟ್ರಿಕ್ ಕ್ಯಾನ್ಸರ್ ಮಕ್ಕಳ) ಕನಸುಗಳನ್ನು ನನಸಾಗಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಆಯೋಜಿಸಿದ ಮಾನವೀಯ ಕಾರ್ಯಕ್ರಮವಾಗಿದೆ.
ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಾಶ್ರೀ (12 ರಿಂದ 14 ವರ್ಷದ ಮಕ್ಕಳು) ಅವರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ “ಒಂದು ದಿನದ ಪೊಲೀಸ್ ಅಧಿಕಾರಿ” ಆಗಿ ಸೇವೆ ಸಲ್ಲಿಸುವ ಅಪರೂಪದ ಅನುಭವ ಪಡೆದಿದ್ದಾರೆ. ಈ ಹೃದಯಸ್ಪರ್ಶಿ ಕಾರ್ಯಕ್ರಮವು ಈ ಧೈರ್ಯಶಾಲಿ ಮಕ್ಕಳಿಗೆ ಸ್ಫೂರ್ತಿ ನೀಡಲು ಮತ್ತು ಸಂತೋಷ ತರಲು ಉದ್ದೇಶಿತವಾಗಿದೆ. ಇದರೊಂದಿಗೆ ಟ್ರಾಫಿಕ್ ಪೊಲೀಸ್ ಮ್ಯೂಸಿಯಂ ಭೇಟಿಯ ಮೂಲಕ ರಸ್ತೆ ಸುರಕ್ಷತೆ ಮತ್ತು ಜನರ ಪ್ರಾಣ ಉಳಿಸಲು ಬೆಂಗಳೂರು ಪೊಲೀಸರು ಹೇಗೆ ಕೆಲಸ ನಿರ್ವಹಿಸುತ್ತಾರೆ ಎಂಬುವುದನ್ನು ಅರ್ಥೈಸುವುದು ಈ ಕಾರ್ಯದ ಪ್ರಮುಖ ಭಾಗವಾಗಿತ್ತು ಎಂದು ಹೇಳಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯವರು ಹಲವಾರು ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು ₹4 ಲಕ್ಷ ಮೌಲ್ಯದ 8 ಕಳ್ಳತನದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನವನ್ನು ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ನಾಗರಿಕರು ಪಾರ್ಕಿಂಗ್ ಮಾಡುವಾಗ ತಮ್ಮ ವಾಹನಗಳನ್ನು ಸುರಕ್ಷಿತವಾಗಿ ಲಾಕ್ ಮಾಡಬೇಕೆಂದು ವಿನಂತಿಸುತ್ತೇವೆ ಎಂದು ತಿಳಿಸಿದರು.
ಮಡಿವಾಳ ಪೊಲೀಸ್ ಠಾಣೆ ಅಧಿಕಾರಿಗಳಿಂದ ಅಂತರರಾಜ್ಯ ಕಳ್ಳನ ಬಂಧನ! ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಹಾಗೂ ತೆಲಂಗಾಣ ಸೇರಿದಂತೆ 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದು ಮನೆ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಒಟ್ಟು ₹12.25 ಲಕ್ಷ ಮೌಲ್ಯದ 181 ಗ್ರಾಂ ಚಿನ್ನ ಮತ್ತು 333 ಗ್ರಾಂ ಬೆಳ್ಳಿಯನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮತ್ತು ಸಹಚರನು ತಪ್ಪೊಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…