ಕ್ಯಾನ್ಸರ್ ಗುಣಮುಖರಾದವರಿಗೆ ಐಪಿಎಲ್ ಪಂದ್ಯ ವೀಕ್ಷಣೆಗೆ ಅವಕಾಶ

ಬೆಂಗಳೂರು :ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಜನರಿಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದ ವೀಕ್ಷಣೆಗೆ ವಿಶೇಷ ವ್ಯವಸ್ಥೆವನ್ನು ಮಣಿಪಾಲ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿತ್ತು .

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಧಿಕೃತ ಆರೋಗ್ಯ ಪಾರ್ಟ್ನರ್ ಮಣಿಪಾಲ ಆಸ್ಪತ್ರೆ ,ಆರ್ ಸಿಬಿ ತಂಡದ ಸಹಕಾರದಲ್ಲಿ ಯುವ ಕ್ಯಾನ್ಸರ್ ಪೀಡಿತರು ಮತ್ತು ಅವರ ಪೋಷಕರಿಗೆ ಪಂದ್ಯ ವೀಕ್ಷಣೆಗೆ ವಿಶೇಷ ವ್ಯವಸ್ಥೆಯನ್ನು ಒದಗಿಸಿತು .

ಕ್ಯಾನ್ಸರ್ ನ ರೋಗ ನಿರ್ಣಯವದ ಕ್ಷಣದಿಂದ ಕ್ಯಾನ್ಸರ್ ನಿಂದ ಚೇತರಿಸಿಕೊಳ್ಳುವ ನಡುವಿನ ಅವಧಿಯಲ್ಲಿ ರೋಗಿಗಳು ಭಯ, ದುಃಖ, ಆತಂಕ ಮತ್ತು ಖಿನ್ನತೆಯನ್ನು ಅನುಭವಿಸುತ್ತಾರೆ, ಚೇತರಿಕೆಯ ನಂತರವೂ, ಈ ಭಾವನೆಗಳು ಉಳಿಯುತ್ತವೆ. ಹೊಸ ಅವಕಾಶಗಳನ್ನು ಅಳವಡಿಸಿಕೊಳ್ಳಲು ಮತ್ತು ಮಾನಸಿಕವಾಗಿ ಗುಣವಾಗಲು ರೋಗಿಗಳು ತಮ್ಮ ಭಯವನ್ನು ಹೋಗಲಾಡಿಸ ಉದ್ದೇಶ ಈ ವ್ಯವಸ್ಥೆಯನ್ನು ಕೈಗೊಂಡಿದ್ದರು .

ವಿಶೇಷವಾಗಿ ಮಕ್ಕಳಲ್ಲಿ, ಕ್ಯಾನ್ಸರ್ ಚಿಕಿತ್ಸೆಗಾಗಿ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುವುದು ಅವರನ್ನು ಮಾನಸಿಕವಾಗಿ ಜರ್ಜರಿತವಾಗಿಸಬಹುದು, ಇದರಿಂದಾಗಿ ಅವರು ತಮ್ಮ ಬಾಲ್ಯವನ್ನು ಆಹ್ಲಾದಿಸುವ, ಮೋಜು ಮಾಡುವ, ಭರವಸೆ ಮತ್ತು ಉತ್ಸಾಹವನ್ನು ಕಳೆದುಕೊಳ್ಳುತ್ತಾರೆ , ಇದನ್ನು ಗಮನದಲ್ಲಿಟ್ಟುಕೊಂಡು, ಮಣಿಪಾಲ್ ಆಸ್ಪತ್ರೆಗಳು ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಮತ್ತು ಅವರ ಪೋಷಕರನ್ನು ಸಂದರ್ಶಿಸಿ, ಅವರಿಗೆ ಸರಿಯಾದ ಸುರಕ್ಷತೆ, ಆರೈಕೆ ಮತ್ತು  ಮೋಜಿನ ದಿನವನ್ನು ನೀಡುವ ಭರವಸೆಯೊಂದಿಗೆ ಅವರನ್ನು ಸಭಾಂಗಣಕ್ಕೆ ಆಹ್ವಾನಿಸಿದ್ದರು. ಸುಲಭವಾಗಿ ಗುರುತಿಸಲು ಪ್ರತಿ ಸ್ಪರ್ಧಿಗೆ ರಿಸ್ಟ್ಬ್ಯಾಂಡ್ ನೀಡಲಾಗಿತ್ತು .

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

7 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

8 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 days ago