ಬೆಂಗಳೂರು :ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಜನರಿಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದ ವೀಕ್ಷಣೆಗೆ ವಿಶೇಷ ವ್ಯವಸ್ಥೆವನ್ನು ಮಣಿಪಾಲ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿತ್ತು .
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಧಿಕೃತ ಆರೋಗ್ಯ ಪಾರ್ಟ್ನರ್ ಮಣಿಪಾಲ ಆಸ್ಪತ್ರೆ ,ಆರ್ ಸಿಬಿ ತಂಡದ ಸಹಕಾರದಲ್ಲಿ ಯುವ ಕ್ಯಾನ್ಸರ್ ಪೀಡಿತರು ಮತ್ತು ಅವರ ಪೋಷಕರಿಗೆ ಪಂದ್ಯ ವೀಕ್ಷಣೆಗೆ ವಿಶೇಷ ವ್ಯವಸ್ಥೆಯನ್ನು ಒದಗಿಸಿತು .
ಕ್ಯಾನ್ಸರ್ ನ ರೋಗ ನಿರ್ಣಯವದ ಕ್ಷಣದಿಂದ ಕ್ಯಾನ್ಸರ್ ನಿಂದ ಚೇತರಿಸಿಕೊಳ್ಳುವ ನಡುವಿನ ಅವಧಿಯಲ್ಲಿ ರೋಗಿಗಳು ಭಯ, ದುಃಖ, ಆತಂಕ ಮತ್ತು ಖಿನ್ನತೆಯನ್ನು ಅನುಭವಿಸುತ್ತಾರೆ, ಚೇತರಿಕೆಯ ನಂತರವೂ, ಈ ಭಾವನೆಗಳು ಉಳಿಯುತ್ತವೆ. ಹೊಸ ಅವಕಾಶಗಳನ್ನು ಅಳವಡಿಸಿಕೊಳ್ಳಲು ಮತ್ತು ಮಾನಸಿಕವಾಗಿ ಗುಣವಾಗಲು ರೋಗಿಗಳು ತಮ್ಮ ಭಯವನ್ನು ಹೋಗಲಾಡಿಸ ಉದ್ದೇಶ ಈ ವ್ಯವಸ್ಥೆಯನ್ನು ಕೈಗೊಂಡಿದ್ದರು .
ವಿಶೇಷವಾಗಿ ಮಕ್ಕಳಲ್ಲಿ, ಕ್ಯಾನ್ಸರ್ ಚಿಕಿತ್ಸೆಗಾಗಿ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುವುದು ಅವರನ್ನು ಮಾನಸಿಕವಾಗಿ ಜರ್ಜರಿತವಾಗಿಸಬಹುದು, ಇದರಿಂದಾಗಿ ಅವರು ತಮ್ಮ ಬಾಲ್ಯವನ್ನು ಆಹ್ಲಾದಿಸುವ, ಮೋಜು ಮಾಡುವ, ಭರವಸೆ ಮತ್ತು ಉತ್ಸಾಹವನ್ನು ಕಳೆದುಕೊಳ್ಳುತ್ತಾರೆ , ಇದನ್ನು ಗಮನದಲ್ಲಿಟ್ಟುಕೊಂಡು, ಮಣಿಪಾಲ್ ಆಸ್ಪತ್ರೆಗಳು ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಮತ್ತು ಅವರ ಪೋಷಕರನ್ನು ಸಂದರ್ಶಿಸಿ, ಅವರಿಗೆ ಸರಿಯಾದ ಸುರಕ್ಷತೆ, ಆರೈಕೆ ಮತ್ತು ಮೋಜಿನ ದಿನವನ್ನು ನೀಡುವ ಭರವಸೆಯೊಂದಿಗೆ ಅವರನ್ನು ಸಭಾಂಗಣಕ್ಕೆ ಆಹ್ವಾನಿಸಿದ್ದರು. ಸುಲಭವಾಗಿ ಗುರುತಿಸಲು ಪ್ರತಿ ಸ್ಪರ್ಧಿಗೆ ರಿಸ್ಟ್ಬ್ಯಾಂಡ್ ನೀಡಲಾಗಿತ್ತು .
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…