ಜಾರ್ಖಂಡ್ ನ ಸಣ್ಣ ಪಟ್ಟಣವಾದ ರಾಂಚಿಯಿಂದ ಬಂದು ಐಸಿಸಿ ಆಯೋಜಿಸುವ ಎಲ್ಲಾ ಮಾದರಿಯ ಟ್ರೋಫಿ ಗೆದ್ದು, ಕೋಟ್ಯಂತರ ಅಭಿಮಾನಿಗಳ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದು , ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಇಡೀ ಕ್ರಿಕೆಟ್ ಜಗತ್ತು ಸಾಕ್ಷಿಯಾಗಿದೆ.
ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ನಂತರ ಅತ್ಯಂತ ಸಂಕಷ್ಟದಲ್ಲಿದ್ದ ಭಾರತ ತಂಡದ ನಾಯಕತ್ವ ವಹಿಸಿಕೊಂಡ ವಿಕೆಟ್ ಕೀಪರ್- ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ಅವರ ಆರಂಭಿಕ ದಿನಗಳು ಉತ್ತಮವಾಗಿರಲಿಲ್ಲ.
2013 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿ ಭಾರತಕ್ಕೆ ಟ್ರೋಫಿ ದೊರಕಿಸಿಕೊಟ್ಟರು. ನಾಯಕನಾಗಿ, ವಿಕೆಟ್ ಕೀಪರ್ ಆಗಿ, ಮ್ಯಾಚ್ ಫಿನಿಶರ್ ಹಾಗೂ ಮೆಂಟರ್ ಆಗಿರುವ ಧೋನಿ ಲಕ್ಷಾಂತರ ಯುವ ಆಟಗಾರರಿಗೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ.
2008 ರಿಂದ ಆರಂಭವಾಗಿರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ ನಾಯಕನಾಗಿ 200 ಪಂದ್ಯಗಳು ಪೂರೈಸಿ ದಾಖಲೆ ಬರೆದಿದ್ದಾರೆ, 14 ಆವೃತ್ತಿಯ ಐಪಿಎಲ್ ನಲ್ಲಿ 11 ಬಾರಿ ಫೈನಲ್ ಪಂದ್ಯದಲ್ಲಿ ಆಡಿದ್ದು 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ಯಾಪ್ಟನ್ ಕೂಲ್ ಖ್ಯಾತಿ ಧೋನಿ ಅವರು ಪ್ಯಾರಾ ಮಿಲಿಟರಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ, ಭಾರತ ಸರ್ಕಾರದಿಂದ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ತಮಿಳುನಾಡು ಸಿಎಂ ಸ್ಟಾಲಿನ್, ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಹಭ೯ಜನ್ ಸಿಂಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಜನ್ಮದಿನಾಚರಣೆಯ ಶುಭಾಶಯ ಕೋರಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…