ಜಾರ್ಖಂಡ್ ನ ಸಣ್ಣ ಪಟ್ಟಣವಾದ ರಾಂಚಿಯಿಂದ ಬಂದು ಐಸಿಸಿ ಆಯೋಜಿಸುವ ಎಲ್ಲಾ ಮಾದರಿಯ ಟ್ರೋಫಿ ಗೆದ್ದು, ಕೋಟ್ಯಂತರ ಅಭಿಮಾನಿಗಳ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದು , ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಇಡೀ ಕ್ರಿಕೆಟ್ ಜಗತ್ತು ಸಾಕ್ಷಿಯಾಗಿದೆ.
ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ನಂತರ ಅತ್ಯಂತ ಸಂಕಷ್ಟದಲ್ಲಿದ್ದ ಭಾರತ ತಂಡದ ನಾಯಕತ್ವ ವಹಿಸಿಕೊಂಡ ವಿಕೆಟ್ ಕೀಪರ್- ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ಅವರ ಆರಂಭಿಕ ದಿನಗಳು ಉತ್ತಮವಾಗಿರಲಿಲ್ಲ.
2013 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿ ಭಾರತಕ್ಕೆ ಟ್ರೋಫಿ ದೊರಕಿಸಿಕೊಟ್ಟರು. ನಾಯಕನಾಗಿ, ವಿಕೆಟ್ ಕೀಪರ್ ಆಗಿ, ಮ್ಯಾಚ್ ಫಿನಿಶರ್ ಹಾಗೂ ಮೆಂಟರ್ ಆಗಿರುವ ಧೋನಿ ಲಕ್ಷಾಂತರ ಯುವ ಆಟಗಾರರಿಗೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ.
2008 ರಿಂದ ಆರಂಭವಾಗಿರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ ನಾಯಕನಾಗಿ 200 ಪಂದ್ಯಗಳು ಪೂರೈಸಿ ದಾಖಲೆ ಬರೆದಿದ್ದಾರೆ, 14 ಆವೃತ್ತಿಯ ಐಪಿಎಲ್ ನಲ್ಲಿ 11 ಬಾರಿ ಫೈನಲ್ ಪಂದ್ಯದಲ್ಲಿ ಆಡಿದ್ದು 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ಯಾಪ್ಟನ್ ಕೂಲ್ ಖ್ಯಾತಿ ಧೋನಿ ಅವರು ಪ್ಯಾರಾ ಮಿಲಿಟರಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ, ಭಾರತ ಸರ್ಕಾರದಿಂದ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ತಮಿಳುನಾಡು ಸಿಎಂ ಸ್ಟಾಲಿನ್, ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಹಭ೯ಜನ್ ಸಿಂಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಜನ್ಮದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…