ಜಾರ್ಖಂಡ್ ನ ಸಣ್ಣ ಪಟ್ಟಣವಾದ ರಾಂಚಿಯಿಂದ ಬಂದು ಐಸಿಸಿ ಆಯೋಜಿಸುವ ಎಲ್ಲಾ ಮಾದರಿಯ ಟ್ರೋಫಿ ಗೆದ್ದು, ಕೋಟ್ಯಂತರ ಅಭಿಮಾನಿಗಳ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದು , ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಇಡೀ ಕ್ರಿಕೆಟ್ ಜಗತ್ತು ಸಾಕ್ಷಿಯಾಗಿದೆ.
ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ನಂತರ ಅತ್ಯಂತ ಸಂಕಷ್ಟದಲ್ಲಿದ್ದ ಭಾರತ ತಂಡದ ನಾಯಕತ್ವ ವಹಿಸಿಕೊಂಡ ವಿಕೆಟ್ ಕೀಪರ್- ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ಅವರ ಆರಂಭಿಕ ದಿನಗಳು ಉತ್ತಮವಾಗಿರಲಿಲ್ಲ.
2013 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿ ಭಾರತಕ್ಕೆ ಟ್ರೋಫಿ ದೊರಕಿಸಿಕೊಟ್ಟರು. ನಾಯಕನಾಗಿ, ವಿಕೆಟ್ ಕೀಪರ್ ಆಗಿ, ಮ್ಯಾಚ್ ಫಿನಿಶರ್ ಹಾಗೂ ಮೆಂಟರ್ ಆಗಿರುವ ಧೋನಿ ಲಕ್ಷಾಂತರ ಯುವ ಆಟಗಾರರಿಗೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ.
2008 ರಿಂದ ಆರಂಭವಾಗಿರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ ನಾಯಕನಾಗಿ 200 ಪಂದ್ಯಗಳು ಪೂರೈಸಿ ದಾಖಲೆ ಬರೆದಿದ್ದಾರೆ, 14 ಆವೃತ್ತಿಯ ಐಪಿಎಲ್ ನಲ್ಲಿ 11 ಬಾರಿ ಫೈನಲ್ ಪಂದ್ಯದಲ್ಲಿ ಆಡಿದ್ದು 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ಯಾಪ್ಟನ್ ಕೂಲ್ ಖ್ಯಾತಿ ಧೋನಿ ಅವರು ಪ್ಯಾರಾ ಮಿಲಿಟರಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ, ಭಾರತ ಸರ್ಕಾರದಿಂದ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ತಮಿಳುನಾಡು ಸಿಎಂ ಸ್ಟಾಲಿನ್, ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಹಭ೯ಜನ್ ಸಿಂಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಜನ್ಮದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…