ಕ್ಯೂಆರ್ ಕೋಡ್ ಬಳಸಿ ಮತದಾರರ ಮಾಹಿತಿ ಕಳ್ಳತನ ಮಾಡುವ ಬಿಜೆಪಿ ಅಭ್ಯರ್ಥಿ – ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪ

ಕ್ಯೂ ಆರ್‌ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..

ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ‌ ಸೇವೆ‌ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ‌ ಜನರನ್ನು ಯಾಮಾರಿಸುತ್ತಿದ್ದಾರೆ..

ತಾಲೂಕಿನ ಜನರನ್ನು‌ ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..

ಸರ್ಕಾರದ ಅನುಮತಿ‌ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..

ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರ‌ಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ‌ ಆಶೀರ್ವಾದ‌ ಮಾಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

9 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

12 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

13 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

24 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago