ಕ್ಯೂಆರ್ ಕೋಡ್ ಬಳಸಿ ಮತದಾರರ ಮಾಹಿತಿ ಕಳ್ಳತನ ಮಾಡುವ ಬಿಜೆಪಿ ಅಭ್ಯರ್ಥಿ – ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪ

ಕ್ಯೂ ಆರ್‌ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..

ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ‌ ಸೇವೆ‌ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ‌ ಜನರನ್ನು ಯಾಮಾರಿಸುತ್ತಿದ್ದಾರೆ..

ತಾಲೂಕಿನ ಜನರನ್ನು‌ ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..

ಸರ್ಕಾರದ ಅನುಮತಿ‌ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..

ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರ‌ಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ‌ ಆಶೀರ್ವಾದ‌ ಮಾಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

3 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

7 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago