ಕ್ಯೂಆರ್ ಕೋಡ್ ಬಳಸಿ ಮತದಾರರ ಮಾಹಿತಿ ಕಳ್ಳತನ ಮಾಡುವ ಬಿಜೆಪಿ ಅಭ್ಯರ್ಥಿ – ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪ

ಕ್ಯೂ ಆರ್‌ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..

ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ‌ ಸೇವೆ‌ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ‌ ಜನರನ್ನು ಯಾಮಾರಿಸುತ್ತಿದ್ದಾರೆ..

ತಾಲೂಕಿನ ಜನರನ್ನು‌ ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..

ಸರ್ಕಾರದ ಅನುಮತಿ‌ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..

ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರ‌ಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ‌ ಆಶೀರ್ವಾದ‌ ಮಾಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago