ಕ್ಯೂ ಆರ್ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..
ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ ಜನರನ್ನು ಯಾಮಾರಿಸುತ್ತಿದ್ದಾರೆ..
ತಾಲೂಕಿನ ಜನರನ್ನು ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..
ಸರ್ಕಾರದ ಅನುಮತಿ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..
ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ ಆಶೀರ್ವಾದ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…