ಕ್ಯೂ ಆರ್ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..
ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ ಜನರನ್ನು ಯಾಮಾರಿಸುತ್ತಿದ್ದಾರೆ..
ತಾಲೂಕಿನ ಜನರನ್ನು ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..
ಸರ್ಕಾರದ ಅನುಮತಿ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..
ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ ಆಶೀರ್ವಾದ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…