ಕ್ಯೂಆರ್ ಕೋಡ್ ಬಳಸಿ ಮತದಾರರ ಮಾಹಿತಿ ಕಳ್ಳತನ ಮಾಡುವ ಬಿಜೆಪಿ ಅಭ್ಯರ್ಥಿ – ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪ

ಕ್ಯೂ ಆರ್‌ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..

ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ‌ ಸೇವೆ‌ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ‌ ಜನರನ್ನು ಯಾಮಾರಿಸುತ್ತಿದ್ದಾರೆ..

ತಾಲೂಕಿನ ಜನರನ್ನು‌ ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..

ಸರ್ಕಾರದ ಅನುಮತಿ‌ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..

ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರ‌ಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ‌ ಆಶೀರ್ವಾದ‌ ಮಾಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

5 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

10 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago