ಕ್ಯೂಆರ್ ಕೋಡ್ ಬಳಸಿ ಮತದಾರರ ಮಾಹಿತಿ ಕಳ್ಳತನ ಮಾಡುವ ಬಿಜೆಪಿ ಅಭ್ಯರ್ಥಿ – ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪ

ಕ್ಯೂ ಆರ್‌ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..

ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ‌ ಸೇವೆ‌ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ‌ ಜನರನ್ನು ಯಾಮಾರಿಸುತ್ತಿದ್ದಾರೆ..

ತಾಲೂಕಿನ ಜನರನ್ನು‌ ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..

ಸರ್ಕಾರದ ಅನುಮತಿ‌ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..

ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರ‌ಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ‌ ಆಶೀರ್ವಾದ‌ ಮಾಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago