ಕ್ಯೂ ಆರ್ಕೋಡ್ ಬಳಸಿ ಮತದಾರರ ಮಾಹಿತಿ ಕದಿಯುವ ಮೂಲಕ ರಾಜಕೀಯ ವ್ಯವಸ್ಥೆಯನ್ನು ಬಿಜೆಪಿ ಅಭ್ಯರ್ಥಿ ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು..
ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವ ವೇಳೆ QR ಕೋಡ್ ಬಳಕೆ ಮಾಡಿರುವ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡು-ಮೂರು ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದಂತೆ ಈಗಲೂ ಕ್ಯೂಆರ್ ಕೋಡ್ ಕೂಪನ್ ಬಳಸಿ ಜನರನ್ನು ಯಾಮಾರಿಸುತ್ತಿದ್ದಾರೆ..
ತಾಲೂಕಿನ ಜನರನ್ನು ದುಡ್ಡಿನಿಂದ ಅಳೆಯಲಾಗದು. QR ಕೋಡ್ ನಲ್ಲಿ ಏನಿದೆ, ಏನೆಲ್ಲಾ ಒಳಗೊಂಡಿದೆ ಎಂಬುದು ಈ ಕೂಡಲೇ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.. ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರಿಗೆ ಮುಖಂಡರ ಮೇಲೆ ಅನುಮಾನ ಇದ್ದು ಬೇರೆ ಗ್ರಾಮಗಳಿಂದ ಜನರನ್ನು ಕರೆದುಕೊಂಡು ಬಂದು ಚುನಾವಣಾ ಪ್ರಚಾರ ಮಾಡಿಸುತ್ತಿದ್ದಾರೆ..
ಸರ್ಕಾರದ ಅನುಮತಿ ಇಲ್ಲದೇ ಏಕಾಏಕಿ ಕ್ಯೂಆರ್ ಕೋಡ್ ಕೂಪನ್ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇದರ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಕೈಗೋಳ್ಳಬೇಕು ಎಂದರು..
ನಾಳೆಯಿಂದ ಪ್ರಚಾರದ ವರಸೆ ಬದಲಿಸುತ್ತೇವೆ, ದೊಡ್ಡಬಳ್ಳಾಪುರದ ಜನರ ಬಗ್ಗೆ ಬಿಜೆಪಿ ಅಭ್ಯರ್ಥಿಗೆ ತಿಳಿದಿಲ್ಲ. ಹಣದಿಂದ ಎಲ್ಲವನ್ನೂ ಅಳತೆ ಮಾಡಲು ಹೊರಟಿದ್ದಾರೆ, ಜನರಮಧ್ಯೆ ಇದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರಿಗೆ ಜನ ಆಶೀರ್ವಾದ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಕೆಸ್ತೂರ್ ರಮೇಶ್, ರಾಜಣ್ಣ, ರಾಮಚಂದ್ರ ಬಾಬು, ಭರತ್ ರಾಜ್ ಕೆ.ಬಿ ಉಮೇಶ್, ಭಾನುಪ್ರಕಾಶ್ , ನರೇಂದ್ರ, ಇಪ್ತಿಕರ್ ಅಹಮ್ಮದ್, ಮಂಜುನಾಥ್, ಅಪ್ಪಾಜಿಗೌಡ ಇದ್ದರು..
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…