ಕ್ರಯೋ ಪ್ರೋಬ್ ಅತ್ಯಾಧುನಿಕ ಉಪಕರಣದಿಂದ ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ

ಬೆಂಗಳೂರು, ವೈಟ್ ಫೀಲ್ದ್ : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7 ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ.

ಕ್ರಯೋ ಪ್ರೋಬ್ ಬಳಕೆ ಮಾಡದೇ ಇದ್ದಿದ್ದರೆ ಈ ಚಿಕಿತ್ಸೆಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ತಗಲುತ್ತಿತ್ತು.

81 ವರ್ಷದ ವೃದ್ದನಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಹಾಗೂ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಮಧ್ಯ ರಾತ್ರಿ ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಹೃದಯಕ್ಕೆ ಸಂಭಂಧಿಸಿದ ಪರೀಕ್ಷೆಗಳನ್ನು ನಡೆಸಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ನೀಡಿ ವಾಫಸ್‌ ಮನೆಗೆ ಕಳುಹಿಸಿಕೊಡಲಾಗಿತ್ತು. ಆದ್ರೆ ವೃದ್ದನಿಗೆ ನೋವು ಮಾತ್ರ ಕಮ್ಮಿಯಾಗಿರಲಿಲ್ಲ. ಬಳಿಕ ವೈಟ್‌ ಪೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಇಂಟರ್ವೆನ್ಷನಲ್‌ ಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ರವರನ್ನು ಭೇಟಿ ಮಾಡಿ, ವೃದ್ದ ತನ್ನ ನೋವಿಗೆ ನಿಜವಾದ ಕಾರಣವೇನೆಂದು ತಿಳಿದುಕೊಂಡಿದ್ದಾರೆ.

ವೃದ್ದನಿಗೆ ಪ್ರತಿ ದಿನ ಮಲಗುವಾಗ ಬಾಯಿಯಲ್ಲಿ ಅಡಿಕೆಯನ್ನು ಇಟ್ಟುಕೊಂಡು ಮಲಗುವ ಅಭ್ಯಾಸವಿತ್ತು. ನಿದ್ದೆ ವೇಳೆ ಅಡಿಕೆಯ ತುಂಡುಗಳು ಶ್ವಾಸಕೋಶದೊಳಗಡೆ ಹೋಗಿತ್ತು. ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಶುರುವಾಗಿತ್ತು. ತಕ್ಷಣ ಅವರಿಗೆ ಆಕ್ಸಿಜನ್ ನೀಡಿ ಎಕ್ಸ್ ರೇ ತೆಗೆದಾಗ ಶ್ವಾಸಕೋಶದ ಕೆಳಗಿಳ ಪದರ ಸಂಪೂರ್ಣವಾಗಿ ಹದಗೆಟ್ಟಿರೋದು ತಿಳಿದು ಬಂದಿತ್ತು.ಕೂಡಲೇ ಅವರನ್ನು ಅಪರೇಷನ್ ಥಿಯೇಟರ್ ಕರೆದೊಯ್ದು, ಲಾರಿಂಜಿಯಲ್ ಮಾಸ್ಕ್ ಏರ್ವೇ ಬಳಸಿ ಶಸ್ತ್ರ ಚಿಕಿತ್ಸೆ ಶುರು ಮಾಡಲಾಯಿತು. ಶಸ್ತ್ರ ಚಿಕಿತ್ಸೆ ವೇಳೆ ಎಡ ಮುಖ್ಯ ಶ್ವಾಸನಾಳ ಸಂಪೂರ್ಣವಾಗಿ ಬ್ಲಾಕ್ ಆಗಿರೋದು ಗೊತ್ತಾಗಿದೆ. 1.7 mm ಸೈಜ್ ನ ಕ್ರಯೋ ಪ್ರೋಬ್ ಉಪಕರಣದ ಸಹಾಯದಿಂದ ಅಡಿಕೆ ತುಂಡುಗಳನ್ನು ಕೇವಲ ೭ ನಿಮಿಷದಲ್ಲಿ ಸಂಪೂರ್ಣವಾಗಿ ಹೊರತೆಗೆಯವಲ್ಲಿಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ಯಶಸ್ವಿಯಾಗಿದ್ದಾರೆ .

ಅತ್ಯಾಧುನಿಕ ಉಪಕರಣ ಬಳಕೆಯಿಂದ ರೋಗಿಗೆ ಅನಗತ್ಯವಾಗಿ ಸಿಟಿ ಸ್ಕ್ಯಾನ್ ಮಾಡುವ ಅವಶ್ಯಕತೆ ಇರೋದಿಲ್ಲ ಹಾಗೂ ಗಂಟೆಗಟ್ಟಲೆ ರೋಗಿಗೆ ಅಪರೇಷನ್‌ ಮಾಡುವ ಅಗತ್ಯನೇ ಇರೋದಿಲ್ಲ ಎಂದು ಡಾ ಮಂಜುನಾಥ್‌ ಅಭಿಪ್ರಾಯ ಪಟ್ಟಿದ್ದಾರೆ .

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

29 minutes ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

12 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

13 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

13 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

16 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

23 hours ago