ಕ್ರಯೋ ಪ್ರೋಬ್ ಅತ್ಯಾಧುನಿಕ ಉಪಕರಣದಿಂದ ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ

ಬೆಂಗಳೂರು, ವೈಟ್ ಫೀಲ್ದ್ : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7 ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ.

ಕ್ರಯೋ ಪ್ರೋಬ್ ಬಳಕೆ ಮಾಡದೇ ಇದ್ದಿದ್ದರೆ ಈ ಚಿಕಿತ್ಸೆಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ತಗಲುತ್ತಿತ್ತು.

81 ವರ್ಷದ ವೃದ್ದನಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಹಾಗೂ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಮಧ್ಯ ರಾತ್ರಿ ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಹೃದಯಕ್ಕೆ ಸಂಭಂಧಿಸಿದ ಪರೀಕ್ಷೆಗಳನ್ನು ನಡೆಸಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ನೀಡಿ ವಾಫಸ್‌ ಮನೆಗೆ ಕಳುಹಿಸಿಕೊಡಲಾಗಿತ್ತು. ಆದ್ರೆ ವೃದ್ದನಿಗೆ ನೋವು ಮಾತ್ರ ಕಮ್ಮಿಯಾಗಿರಲಿಲ್ಲ. ಬಳಿಕ ವೈಟ್‌ ಪೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಇಂಟರ್ವೆನ್ಷನಲ್‌ ಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ರವರನ್ನು ಭೇಟಿ ಮಾಡಿ, ವೃದ್ದ ತನ್ನ ನೋವಿಗೆ ನಿಜವಾದ ಕಾರಣವೇನೆಂದು ತಿಳಿದುಕೊಂಡಿದ್ದಾರೆ.

ವೃದ್ದನಿಗೆ ಪ್ರತಿ ದಿನ ಮಲಗುವಾಗ ಬಾಯಿಯಲ್ಲಿ ಅಡಿಕೆಯನ್ನು ಇಟ್ಟುಕೊಂಡು ಮಲಗುವ ಅಭ್ಯಾಸವಿತ್ತು. ನಿದ್ದೆ ವೇಳೆ ಅಡಿಕೆಯ ತುಂಡುಗಳು ಶ್ವಾಸಕೋಶದೊಳಗಡೆ ಹೋಗಿತ್ತು. ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಶುರುವಾಗಿತ್ತು. ತಕ್ಷಣ ಅವರಿಗೆ ಆಕ್ಸಿಜನ್ ನೀಡಿ ಎಕ್ಸ್ ರೇ ತೆಗೆದಾಗ ಶ್ವಾಸಕೋಶದ ಕೆಳಗಿಳ ಪದರ ಸಂಪೂರ್ಣವಾಗಿ ಹದಗೆಟ್ಟಿರೋದು ತಿಳಿದು ಬಂದಿತ್ತು.ಕೂಡಲೇ ಅವರನ್ನು ಅಪರೇಷನ್ ಥಿಯೇಟರ್ ಕರೆದೊಯ್ದು, ಲಾರಿಂಜಿಯಲ್ ಮಾಸ್ಕ್ ಏರ್ವೇ ಬಳಸಿ ಶಸ್ತ್ರ ಚಿಕಿತ್ಸೆ ಶುರು ಮಾಡಲಾಯಿತು. ಶಸ್ತ್ರ ಚಿಕಿತ್ಸೆ ವೇಳೆ ಎಡ ಮುಖ್ಯ ಶ್ವಾಸನಾಳ ಸಂಪೂರ್ಣವಾಗಿ ಬ್ಲಾಕ್ ಆಗಿರೋದು ಗೊತ್ತಾಗಿದೆ. 1.7 mm ಸೈಜ್ ನ ಕ್ರಯೋ ಪ್ರೋಬ್ ಉಪಕರಣದ ಸಹಾಯದಿಂದ ಅಡಿಕೆ ತುಂಡುಗಳನ್ನು ಕೇವಲ ೭ ನಿಮಿಷದಲ್ಲಿ ಸಂಪೂರ್ಣವಾಗಿ ಹೊರತೆಗೆಯವಲ್ಲಿಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ಯಶಸ್ವಿಯಾಗಿದ್ದಾರೆ .

ಅತ್ಯಾಧುನಿಕ ಉಪಕರಣ ಬಳಕೆಯಿಂದ ರೋಗಿಗೆ ಅನಗತ್ಯವಾಗಿ ಸಿಟಿ ಸ್ಕ್ಯಾನ್ ಮಾಡುವ ಅವಶ್ಯಕತೆ ಇರೋದಿಲ್ಲ ಹಾಗೂ ಗಂಟೆಗಟ್ಟಲೆ ರೋಗಿಗೆ ಅಪರೇಷನ್‌ ಮಾಡುವ ಅಗತ್ಯನೇ ಇರೋದಿಲ್ಲ ಎಂದು ಡಾ ಮಂಜುನಾಥ್‌ ಅಭಿಪ್ರಾಯ ಪಟ್ಟಿದ್ದಾರೆ .

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

7 minutes ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

27 minutes ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

11 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

11 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

11 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

15 hours ago