ಕ್ರಯೋ ಪ್ರೋಬ್ ಅತ್ಯಾಧುನಿಕ ಉಪಕರಣದಿಂದ ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ

ಬೆಂಗಳೂರು, ವೈಟ್ ಫೀಲ್ದ್ : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7 ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ.

ಕ್ರಯೋ ಪ್ರೋಬ್ ಬಳಕೆ ಮಾಡದೇ ಇದ್ದಿದ್ದರೆ ಈ ಚಿಕಿತ್ಸೆಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ತಗಲುತ್ತಿತ್ತು.

81 ವರ್ಷದ ವೃದ್ದನಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಹಾಗೂ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಮಧ್ಯ ರಾತ್ರಿ ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಹೃದಯಕ್ಕೆ ಸಂಭಂಧಿಸಿದ ಪರೀಕ್ಷೆಗಳನ್ನು ನಡೆಸಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ನೀಡಿ ವಾಫಸ್‌ ಮನೆಗೆ ಕಳುಹಿಸಿಕೊಡಲಾಗಿತ್ತು. ಆದ್ರೆ ವೃದ್ದನಿಗೆ ನೋವು ಮಾತ್ರ ಕಮ್ಮಿಯಾಗಿರಲಿಲ್ಲ. ಬಳಿಕ ವೈಟ್‌ ಪೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಇಂಟರ್ವೆನ್ಷನಲ್‌ ಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ರವರನ್ನು ಭೇಟಿ ಮಾಡಿ, ವೃದ್ದ ತನ್ನ ನೋವಿಗೆ ನಿಜವಾದ ಕಾರಣವೇನೆಂದು ತಿಳಿದುಕೊಂಡಿದ್ದಾರೆ.

ವೃದ್ದನಿಗೆ ಪ್ರತಿ ದಿನ ಮಲಗುವಾಗ ಬಾಯಿಯಲ್ಲಿ ಅಡಿಕೆಯನ್ನು ಇಟ್ಟುಕೊಂಡು ಮಲಗುವ ಅಭ್ಯಾಸವಿತ್ತು. ನಿದ್ದೆ ವೇಳೆ ಅಡಿಕೆಯ ತುಂಡುಗಳು ಶ್ವಾಸಕೋಶದೊಳಗಡೆ ಹೋಗಿತ್ತು. ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಶುರುವಾಗಿತ್ತು. ತಕ್ಷಣ ಅವರಿಗೆ ಆಕ್ಸಿಜನ್ ನೀಡಿ ಎಕ್ಸ್ ರೇ ತೆಗೆದಾಗ ಶ್ವಾಸಕೋಶದ ಕೆಳಗಿಳ ಪದರ ಸಂಪೂರ್ಣವಾಗಿ ಹದಗೆಟ್ಟಿರೋದು ತಿಳಿದು ಬಂದಿತ್ತು.ಕೂಡಲೇ ಅವರನ್ನು ಅಪರೇಷನ್ ಥಿಯೇಟರ್ ಕರೆದೊಯ್ದು, ಲಾರಿಂಜಿಯಲ್ ಮಾಸ್ಕ್ ಏರ್ವೇ ಬಳಸಿ ಶಸ್ತ್ರ ಚಿಕಿತ್ಸೆ ಶುರು ಮಾಡಲಾಯಿತು. ಶಸ್ತ್ರ ಚಿಕಿತ್ಸೆ ವೇಳೆ ಎಡ ಮುಖ್ಯ ಶ್ವಾಸನಾಳ ಸಂಪೂರ್ಣವಾಗಿ ಬ್ಲಾಕ್ ಆಗಿರೋದು ಗೊತ್ತಾಗಿದೆ. 1.7 mm ಸೈಜ್ ನ ಕ್ರಯೋ ಪ್ರೋಬ್ ಉಪಕರಣದ ಸಹಾಯದಿಂದ ಅಡಿಕೆ ತುಂಡುಗಳನ್ನು ಕೇವಲ ೭ ನಿಮಿಷದಲ್ಲಿ ಸಂಪೂರ್ಣವಾಗಿ ಹೊರತೆಗೆಯವಲ್ಲಿಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ಯಶಸ್ವಿಯಾಗಿದ್ದಾರೆ .

ಅತ್ಯಾಧುನಿಕ ಉಪಕರಣ ಬಳಕೆಯಿಂದ ರೋಗಿಗೆ ಅನಗತ್ಯವಾಗಿ ಸಿಟಿ ಸ್ಕ್ಯಾನ್ ಮಾಡುವ ಅವಶ್ಯಕತೆ ಇರೋದಿಲ್ಲ ಹಾಗೂ ಗಂಟೆಗಟ್ಟಲೆ ರೋಗಿಗೆ ಅಪರೇಷನ್‌ ಮಾಡುವ ಅಗತ್ಯನೇ ಇರೋದಿಲ್ಲ ಎಂದು ಡಾ ಮಂಜುನಾಥ್‌ ಅಭಿಪ್ರಾಯ ಪಟ್ಟಿದ್ದಾರೆ .

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

31 minutes ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

18 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

20 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

20 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

20 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

22 hours ago