ಕ್ರಯೋ ಪ್ರೋಬ್ ಅತ್ಯಾಧುನಿಕ ಉಪಕರಣದಿಂದ ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ

ಬೆಂಗಳೂರು, ವೈಟ್ ಫೀಲ್ದ್ : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7 ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ.

ಕ್ರಯೋ ಪ್ರೋಬ್ ಬಳಕೆ ಮಾಡದೇ ಇದ್ದಿದ್ದರೆ ಈ ಚಿಕಿತ್ಸೆಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ತಗಲುತ್ತಿತ್ತು.

81 ವರ್ಷದ ವೃದ್ದನಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಹಾಗೂ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಮಧ್ಯ ರಾತ್ರಿ ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಹೃದಯಕ್ಕೆ ಸಂಭಂಧಿಸಿದ ಪರೀಕ್ಷೆಗಳನ್ನು ನಡೆಸಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ನೀಡಿ ವಾಫಸ್‌ ಮನೆಗೆ ಕಳುಹಿಸಿಕೊಡಲಾಗಿತ್ತು. ಆದ್ರೆ ವೃದ್ದನಿಗೆ ನೋವು ಮಾತ್ರ ಕಮ್ಮಿಯಾಗಿರಲಿಲ್ಲ. ಬಳಿಕ ವೈಟ್‌ ಪೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಇಂಟರ್ವೆನ್ಷನಲ್‌ ಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ರವರನ್ನು ಭೇಟಿ ಮಾಡಿ, ವೃದ್ದ ತನ್ನ ನೋವಿಗೆ ನಿಜವಾದ ಕಾರಣವೇನೆಂದು ತಿಳಿದುಕೊಂಡಿದ್ದಾರೆ.

ವೃದ್ದನಿಗೆ ಪ್ರತಿ ದಿನ ಮಲಗುವಾಗ ಬಾಯಿಯಲ್ಲಿ ಅಡಿಕೆಯನ್ನು ಇಟ್ಟುಕೊಂಡು ಮಲಗುವ ಅಭ್ಯಾಸವಿತ್ತು. ನಿದ್ದೆ ವೇಳೆ ಅಡಿಕೆಯ ತುಂಡುಗಳು ಶ್ವಾಸಕೋಶದೊಳಗಡೆ ಹೋಗಿತ್ತು. ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಶುರುವಾಗಿತ್ತು. ತಕ್ಷಣ ಅವರಿಗೆ ಆಕ್ಸಿಜನ್ ನೀಡಿ ಎಕ್ಸ್ ರೇ ತೆಗೆದಾಗ ಶ್ವಾಸಕೋಶದ ಕೆಳಗಿಳ ಪದರ ಸಂಪೂರ್ಣವಾಗಿ ಹದಗೆಟ್ಟಿರೋದು ತಿಳಿದು ಬಂದಿತ್ತು.ಕೂಡಲೇ ಅವರನ್ನು ಅಪರೇಷನ್ ಥಿಯೇಟರ್ ಕರೆದೊಯ್ದು, ಲಾರಿಂಜಿಯಲ್ ಮಾಸ್ಕ್ ಏರ್ವೇ ಬಳಸಿ ಶಸ್ತ್ರ ಚಿಕಿತ್ಸೆ ಶುರು ಮಾಡಲಾಯಿತು. ಶಸ್ತ್ರ ಚಿಕಿತ್ಸೆ ವೇಳೆ ಎಡ ಮುಖ್ಯ ಶ್ವಾಸನಾಳ ಸಂಪೂರ್ಣವಾಗಿ ಬ್ಲಾಕ್ ಆಗಿರೋದು ಗೊತ್ತಾಗಿದೆ. 1.7 mm ಸೈಜ್ ನ ಕ್ರಯೋ ಪ್ರೋಬ್ ಉಪಕರಣದ ಸಹಾಯದಿಂದ ಅಡಿಕೆ ತುಂಡುಗಳನ್ನು ಕೇವಲ ೭ ನಿಮಿಷದಲ್ಲಿ ಸಂಪೂರ್ಣವಾಗಿ ಹೊರತೆಗೆಯವಲ್ಲಿಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ಯಶಸ್ವಿಯಾಗಿದ್ದಾರೆ .

ಅತ್ಯಾಧುನಿಕ ಉಪಕರಣ ಬಳಕೆಯಿಂದ ರೋಗಿಗೆ ಅನಗತ್ಯವಾಗಿ ಸಿಟಿ ಸ್ಕ್ಯಾನ್ ಮಾಡುವ ಅವಶ್ಯಕತೆ ಇರೋದಿಲ್ಲ ಹಾಗೂ ಗಂಟೆಗಟ್ಟಲೆ ರೋಗಿಗೆ ಅಪರೇಷನ್‌ ಮಾಡುವ ಅಗತ್ಯನೇ ಇರೋದಿಲ್ಲ ಎಂದು ಡಾ ಮಂಜುನಾಥ್‌ ಅಭಿಪ್ರಾಯ ಪಟ್ಟಿದ್ದಾರೆ .

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

22 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago