ಕ್ರಯೋ ಪ್ರೋಬ್ ಅತ್ಯಾಧುನಿಕ ಉಪಕರಣದಿಂದ ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ

ಬೆಂಗಳೂರು, ವೈಟ್ ಫೀಲ್ದ್ : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7 ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ.

ಕ್ರಯೋ ಪ್ರೋಬ್ ಬಳಕೆ ಮಾಡದೇ ಇದ್ದಿದ್ದರೆ ಈ ಚಿಕಿತ್ಸೆಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ತಗಲುತ್ತಿತ್ತು.

81 ವರ್ಷದ ವೃದ್ದನಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಹಾಗೂ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಮಧ್ಯ ರಾತ್ರಿ ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಹೃದಯಕ್ಕೆ ಸಂಭಂಧಿಸಿದ ಪರೀಕ್ಷೆಗಳನ್ನು ನಡೆಸಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ನೀಡಿ ವಾಫಸ್‌ ಮನೆಗೆ ಕಳುಹಿಸಿಕೊಡಲಾಗಿತ್ತು. ಆದ್ರೆ ವೃದ್ದನಿಗೆ ನೋವು ಮಾತ್ರ ಕಮ್ಮಿಯಾಗಿರಲಿಲ್ಲ. ಬಳಿಕ ವೈಟ್‌ ಪೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಇಂಟರ್ವೆನ್ಷನಲ್‌ ಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ರವರನ್ನು ಭೇಟಿ ಮಾಡಿ, ವೃದ್ದ ತನ್ನ ನೋವಿಗೆ ನಿಜವಾದ ಕಾರಣವೇನೆಂದು ತಿಳಿದುಕೊಂಡಿದ್ದಾರೆ.

ವೃದ್ದನಿಗೆ ಪ್ರತಿ ದಿನ ಮಲಗುವಾಗ ಬಾಯಿಯಲ್ಲಿ ಅಡಿಕೆಯನ್ನು ಇಟ್ಟುಕೊಂಡು ಮಲಗುವ ಅಭ್ಯಾಸವಿತ್ತು. ನಿದ್ದೆ ವೇಳೆ ಅಡಿಕೆಯ ತುಂಡುಗಳು ಶ್ವಾಸಕೋಶದೊಳಗಡೆ ಹೋಗಿತ್ತು. ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಶುರುವಾಗಿತ್ತು. ತಕ್ಷಣ ಅವರಿಗೆ ಆಕ್ಸಿಜನ್ ನೀಡಿ ಎಕ್ಸ್ ರೇ ತೆಗೆದಾಗ ಶ್ವಾಸಕೋಶದ ಕೆಳಗಿಳ ಪದರ ಸಂಪೂರ್ಣವಾಗಿ ಹದಗೆಟ್ಟಿರೋದು ತಿಳಿದು ಬಂದಿತ್ತು.ಕೂಡಲೇ ಅವರನ್ನು ಅಪರೇಷನ್ ಥಿಯೇಟರ್ ಕರೆದೊಯ್ದು, ಲಾರಿಂಜಿಯಲ್ ಮಾಸ್ಕ್ ಏರ್ವೇ ಬಳಸಿ ಶಸ್ತ್ರ ಚಿಕಿತ್ಸೆ ಶುರು ಮಾಡಲಾಯಿತು. ಶಸ್ತ್ರ ಚಿಕಿತ್ಸೆ ವೇಳೆ ಎಡ ಮುಖ್ಯ ಶ್ವಾಸನಾಳ ಸಂಪೂರ್ಣವಾಗಿ ಬ್ಲಾಕ್ ಆಗಿರೋದು ಗೊತ್ತಾಗಿದೆ. 1.7 mm ಸೈಜ್ ನ ಕ್ರಯೋ ಪ್ರೋಬ್ ಉಪಕರಣದ ಸಹಾಯದಿಂದ ಅಡಿಕೆ ತುಂಡುಗಳನ್ನು ಕೇವಲ ೭ ನಿಮಿಷದಲ್ಲಿ ಸಂಪೂರ್ಣವಾಗಿ ಹೊರತೆಗೆಯವಲ್ಲಿಶ್ವಾಸಕೋಶಶಾಸ್ತ್ರಜ್ಞ ಡಾ . ಮಂಜುನಾಥ್‌ ಬಿ ಜಿ ಯಶಸ್ವಿಯಾಗಿದ್ದಾರೆ .

ಅತ್ಯಾಧುನಿಕ ಉಪಕರಣ ಬಳಕೆಯಿಂದ ರೋಗಿಗೆ ಅನಗತ್ಯವಾಗಿ ಸಿಟಿ ಸ್ಕ್ಯಾನ್ ಮಾಡುವ ಅವಶ್ಯಕತೆ ಇರೋದಿಲ್ಲ ಹಾಗೂ ಗಂಟೆಗಟ್ಟಲೆ ರೋಗಿಗೆ ಅಪರೇಷನ್‌ ಮಾಡುವ ಅಗತ್ಯನೇ ಇರೋದಿಲ್ಲ ಎಂದು ಡಾ ಮಂಜುನಾಥ್‌ ಅಭಿಪ್ರಾಯ ಪಟ್ಟಿದ್ದಾರೆ .

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

3 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

4 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

6 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago