ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ಮಳೆರಾಯನ ಅಬ್ಬರಕ್ಕೆ ಪಂದ್ಯ ಸ್ಥಗಿತಗೊಂಡ ಕಾರಣ ಡಿ ಎಲ್ ಎಸ್ ನಿಯಮಾನುಸಾರ 2 ರನ್ ಗಳಿಂದ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಪ್ರಸಿದ್ ಕೃಷ್ಣ ಹಾಗೂ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಭಾರತದ ಪರವಾಗಿ ಪಾದಾರ್ಪಣೆ ಮಾಡಿದರು.