ಕ್ರಿಕೆಟ್: ಐರ್ಲೆಂಡ್ ವಿರುದ್ಧ ಭಾರತ ಶುಭಾರಂಭ

ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.

ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.

ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.

ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.

ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.

ಮಳೆರಾಯನ ಅಬ್ಬರಕ್ಕೆ ಪಂದ್ಯ ಸ್ಥಗಿತಗೊಂಡ ಕಾರಣ ಡಿ ಎಲ್ ಎಸ್ ನಿಯಮಾನುಸಾರ 2 ರನ್ ಗಳಿಂದ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಪ್ರಸಿದ್ ಕೃಷ್ಣ ಹಾಗೂ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಭಾರತದ ಪರವಾಗಿ ಪಾದಾರ್ಪಣೆ ಮಾಡಿದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago