ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…