ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…