ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…