ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…