ಕ್ರಿಕೆಟ್: ಐರ್ಲೆಂಡ್ ವಿರುದ್ಧ ಭಾರತ ಶುಭಾರಂಭ

ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.

ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.

ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.

ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.

ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.

ಮಳೆರಾಯನ ಅಬ್ಬರಕ್ಕೆ ಪಂದ್ಯ ಸ್ಥಗಿತಗೊಂಡ ಕಾರಣ ಡಿ ಎಲ್ ಎಸ್ ನಿಯಮಾನುಸಾರ 2 ರನ್ ಗಳಿಂದ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಪ್ರಸಿದ್ ಕೃಷ್ಣ ಹಾಗೂ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಭಾರತದ ಪರವಾಗಿ ಪಾದಾರ್ಪಣೆ ಮಾಡಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago