ಕ್ರಿಕೆಟ್: ಐರ್ಲೆಂಡ್ ವಿರುದ್ಧ ಭಾರತ ಶುಭಾರಂಭ

ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.

ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.

ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.

ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.

ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.

ಮಳೆರಾಯನ ಅಬ್ಬರಕ್ಕೆ ಪಂದ್ಯ ಸ್ಥಗಿತಗೊಂಡ ಕಾರಣ ಡಿ ಎಲ್ ಎಸ್ ನಿಯಮಾನುಸಾರ 2 ರನ್ ಗಳಿಂದ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಪ್ರಸಿದ್ ಕೃಷ್ಣ ಹಾಗೂ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಭಾರತದ ಪರವಾಗಿ ಪಾದಾರ್ಪಣೆ ಮಾಡಿದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

8 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago