ಕ್ರಿಕೆಟ್: ಐರ್ಲೆಂಡ್ ವಿರುದ್ಧ ಭಾರತ ಶುಭಾರಂಭ

ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.

ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.

ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.

ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.

ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.

ಮಳೆರಾಯನ ಅಬ್ಬರಕ್ಕೆ ಪಂದ್ಯ ಸ್ಥಗಿತಗೊಂಡ ಕಾರಣ ಡಿ ಎಲ್ ಎಸ್ ನಿಯಮಾನುಸಾರ 2 ರನ್ ಗಳಿಂದ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಪ್ರಸಿದ್ ಕೃಷ್ಣ ಹಾಗೂ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಭಾರತದ ಪರವಾಗಿ ಪಾದಾರ್ಪಣೆ ಮಾಡಿದರು.

Ramesh Babu

Journalist

Recent Posts

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

3 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

4 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

5 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

15 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

18 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

22 hours ago