ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…