ಜಸ್ ಪ್ರೀತ್ ಭುಮ್ರಾ ನಾಯಕತ್ವದ ಭಾರತ ತಂಡ ಶನಿವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ವರ್ಥ್ ಲೂಯಿಸ್ ನಿಯಮಾನುಸಾರ 2 ರನ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಉತ್ತಮ ಆರಂಭ ಪಡೆಯಿತು. ದೀರ್ಘ ಕಾಲದ ನಂತರ ಪುನರಾಗಮನ ಮಾಡಿದ ಬೂಮ್ರ ಮೊದಲ ಓವರ್ ನಲ್ಲೆ 2 ವಿಕೆಟ್ ಪಡೆಯುವ ಮೂಲಕಅತಿಥೇಯ ತಂಡಕ್ಕೆ ಆಘಾತ ನೀಡಿದರು.
ಇವರ ಜೊತೆಗೆ ತಂಡಕ್ಕೆ ಉತ್ತಮ ಸಾಥ್ ನೀಡಿದ ಪ್ರಸಿದ್ ಕೃಷ್ಣ ಹಾಗೂ ಸ್ಪಿನ್ನರ್ ರವಿ ಬಿಷ್ಣೊಯ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಐರ್ಲೆಂಡ್ ಬ್ಯಾಟರ್ ಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಒಂದೆಡೆ ವಿಕೆಟ್ ಗಳು ಉರುಳುವ ಸಮಯದಲ್ಲಿ ಸಮಯೋಚಿತ ಆಟವಾಡಿದ ಬ್ಯಾರಿ ಮೆಕ್ರಾಥೈ ಆಕರ್ಷಕ ಅರ್ಧ ಶತಕ (51*) ಗಳಿಸುವ ಮೂಲಕ ತಂಡಕ್ಕೆ ಅಸರೆಯದರು. ಇವರ ಅತ್ಯಮೂಲ್ಯ ರನ್ ಗಳ ಮೂಲಕ ತಂಡ 7 ವಿಕೆಟ್ ನಷ್ಟಕ್ಕೆ ಕೇವಲ 139 ರನ್ ಗಳಷ್ಟೆ ಗಳಿಸಲು ಸಾಧ್ಯವಾಯಿತು.
ಸುಲಭದ ಗುರಿ ಬೆನ್ನತ್ತಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ನಷ್ಟಕ್ಕೆ ತಂಡ 46 ರನ್ ಗಳನ್ನು ಗಳಿಸಿತು. ಆರಂಭಿಕ ಆಟಕ್ಕೆ ಆಘಾತ ನೀಡಿದ ಐರ್ಲೆಂಡ್ ನ ವೇಗಿ ಕ್ರಿಗ್ ಯಂಗ್ 2 ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಆಘಾತ ನೀಡಿದರು.
ಭವಿಷ್ಯದ ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ಮೊದಲ ಎಸೆತದಲ್ಲಿ ಟಕ್ತರ್ ಗೆ ಕ್ಯಾಚ್ ನೀಡುವ ಮೂಲಕ ಶೂನ್ಯ ಮೊತ್ತಕ್ಕೆ ಪೆವಿಲಿಯನ್ ಸೇರಿದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…