ಕ್ರಿಕೆಟ್: ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.

ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.

ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.

ಭಾರತ ಸಂಭಾವ್ಯ ತಂಡ:ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ / ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ (ನಾಯಕ ), ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್

ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.

Ramesh Babu

Journalist

Recent Posts

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

50 minutes ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

55 minutes ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

10 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

11 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

23 hours ago