Categories: ಕೋಲಾರ

ಕ್ರಿಕೆಟ್ ಪಂದ್ಯಾವಳಿ: ಪೊಲೀಸರನ್ನು ಮಣಿಸಿದ ಪತ್ರಕರ್ತರು

ಕೋಲಾರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಸಾರಥ್ಯದ ಜಿಲ್ಲಾ ಪೊಲೀಸ್‌ ತಂಡದ ವಿರುದ್ಧ ಎ.ಜಿ.ಸುರೇಶ್‌ ಕುಮಾರ್‌ ನೇತೃತ್ವದ ಪತ್ರಕರ್ತರು ಎಂಟು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್‌ ಕ್ರೀಡಾಕೂಟದ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್‌ ಪಂದ್ಯದಲ್ಲಿ ಪತ್ರಕರ್ತರು ಮಿಂಚು ಹರಿಸಿದರು.

ಮೊದಲು ಬ್ಯಾಟ್‌ ಮಾಡಿದ ಪೊಲೀಸರು ನಿಗದಿತ 8 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 72 ರನ್‌ ಗಳಿಸಿದರು. ಪತ್ರಕರ್ತರ ತಂಡದವರು 6.1 ಓವರ್‌ಗಳಲ್ಲಿ ಕೇವಲ 2ವಿಕೆಟ್‌ ನಷ್ಟಕ್ಕೆ ಗುರಿ ಮುಟ್ಟಿದರು.

ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕಿರಣ್‌ ಹಾಗೂ ರಘುರಾಜ್‌ ಉತ್ತಮ ಆರಂಭ ನೀಡಿದರು. ಸಿಕ್ಸರ್‌ಗಳ ಮೂಲಕ ಪೊಲೀಸರ ಬೆವರಿಳಿಸಿದರು. ನಂತರ ನಾಯಕ ಸುರೇಶ್‌ ಕುಮಾರ್‌ ಹಾಗೂ ಸಮೀರ್‌ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬೌಲಿಂಗ್‌ನಲ್ಲೂ ಪತ್ರಕರ್ತರು ಉತ್ತಮ ಪ್ರದರ್ಶನ ನೀಡಿದರು. ದೀಪಕ್‌ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ ಪಡೆದರು ಮಿಂಚಿದರು. ಮುದುವಾಣಿ ವೇಣು, ಮಹೇಶ್‌, ಕಿರಣ್‌, ಸುನಿಲ್‌ ಕೂಡ ಗಮನ ಸೆಳೆದರು. ರವಿಕುಮಾರ್‌ ಉತ್ತಮ ಕ್ಯಾಚ್‌ ಪಡೆದರು. ತಂಡದಲ್ಲಿ ರವಿಕುಮಾರ್‌, ಗಂಗಾಧರ್‌, ರವಿ, ಓಂಕಾರ ಮೂರ್ತಿ ಇದ್ದರು.

ಪೊಲೀಸರು, ಸಿಬ್ಬಂದಿ ವರ್ಗದವರು ಸ್ಥಳದಲ್ಲಿದ್ದು ಆಟಗಾರರಿಗೆ ಹುರುಪು ತುಂಬಿದರು. ತಮ್ಮ ತಂಡದ ಆಟಗಾರರು ಸಿಕ್ಸರ್‌, ಬೌಂಡರಿ ಗಳಿಸಿದ ಚಪ್ಪಾಳೆ ತಟ್ಟಿ ಸ್ಫೂರ್ತಿ ತುಂಬಿದರು. ಆದರೆ, ಕಳೆದ ವರ್ಷ ಪೊಲೀಸರ ಎದುರು ಸೋತಿದ್ದ ಪತ್ರಕರ್ತರು ಈ ಬಾರಿ ಗೆಲ್ಲುವ ಮೂಲಕ ತಿರುಗೇಟು ನೀಡಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

3 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

5 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

6 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

20 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago