Categories: ಕೋಲಾರ

ಕ್ರಿಕೆಟ್ ಪಂದ್ಯಾವಳಿ: ಪೊಲೀಸರನ್ನು ಮಣಿಸಿದ ಪತ್ರಕರ್ತರು

ಕೋಲಾರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಸಾರಥ್ಯದ ಜಿಲ್ಲಾ ಪೊಲೀಸ್‌ ತಂಡದ ವಿರುದ್ಧ ಎ.ಜಿ.ಸುರೇಶ್‌ ಕುಮಾರ್‌ ನೇತೃತ್ವದ ಪತ್ರಕರ್ತರು ಎಂಟು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್‌ ಕ್ರೀಡಾಕೂಟದ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್‌ ಪಂದ್ಯದಲ್ಲಿ ಪತ್ರಕರ್ತರು ಮಿಂಚು ಹರಿಸಿದರು.

ಮೊದಲು ಬ್ಯಾಟ್‌ ಮಾಡಿದ ಪೊಲೀಸರು ನಿಗದಿತ 8 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 72 ರನ್‌ ಗಳಿಸಿದರು. ಪತ್ರಕರ್ತರ ತಂಡದವರು 6.1 ಓವರ್‌ಗಳಲ್ಲಿ ಕೇವಲ 2ವಿಕೆಟ್‌ ನಷ್ಟಕ್ಕೆ ಗುರಿ ಮುಟ್ಟಿದರು.

ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕಿರಣ್‌ ಹಾಗೂ ರಘುರಾಜ್‌ ಉತ್ತಮ ಆರಂಭ ನೀಡಿದರು. ಸಿಕ್ಸರ್‌ಗಳ ಮೂಲಕ ಪೊಲೀಸರ ಬೆವರಿಳಿಸಿದರು. ನಂತರ ನಾಯಕ ಸುರೇಶ್‌ ಕುಮಾರ್‌ ಹಾಗೂ ಸಮೀರ್‌ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬೌಲಿಂಗ್‌ನಲ್ಲೂ ಪತ್ರಕರ್ತರು ಉತ್ತಮ ಪ್ರದರ್ಶನ ನೀಡಿದರು. ದೀಪಕ್‌ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ ಪಡೆದರು ಮಿಂಚಿದರು. ಮುದುವಾಣಿ ವೇಣು, ಮಹೇಶ್‌, ಕಿರಣ್‌, ಸುನಿಲ್‌ ಕೂಡ ಗಮನ ಸೆಳೆದರು. ರವಿಕುಮಾರ್‌ ಉತ್ತಮ ಕ್ಯಾಚ್‌ ಪಡೆದರು. ತಂಡದಲ್ಲಿ ರವಿಕುಮಾರ್‌, ಗಂಗಾಧರ್‌, ರವಿ, ಓಂಕಾರ ಮೂರ್ತಿ ಇದ್ದರು.

ಪೊಲೀಸರು, ಸಿಬ್ಬಂದಿ ವರ್ಗದವರು ಸ್ಥಳದಲ್ಲಿದ್ದು ಆಟಗಾರರಿಗೆ ಹುರುಪು ತುಂಬಿದರು. ತಮ್ಮ ತಂಡದ ಆಟಗಾರರು ಸಿಕ್ಸರ್‌, ಬೌಂಡರಿ ಗಳಿಸಿದ ಚಪ್ಪಾಳೆ ತಟ್ಟಿ ಸ್ಫೂರ್ತಿ ತುಂಬಿದರು. ಆದರೆ, ಕಳೆದ ವರ್ಷ ಪೊಲೀಸರ ಎದುರು ಸೋತಿದ್ದ ಪತ್ರಕರ್ತರು ಈ ಬಾರಿ ಗೆಲ್ಲುವ ಮೂಲಕ ತಿರುಗೇಟು ನೀಡಿದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

8 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

10 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

15 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

16 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 days ago