Categories: ಕೋಲಾರ

ಕ್ರಿಕೆಟ್ ಪಂದ್ಯಾವಳಿ: ಪೊಲೀಸರನ್ನು ಮಣಿಸಿದ ಪತ್ರಕರ್ತರು

ಕೋಲಾರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಸಾರಥ್ಯದ ಜಿಲ್ಲಾ ಪೊಲೀಸ್‌ ತಂಡದ ವಿರುದ್ಧ ಎ.ಜಿ.ಸುರೇಶ್‌ ಕುಮಾರ್‌ ನೇತೃತ್ವದ ಪತ್ರಕರ್ತರು ಎಂಟು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್‌ ಕ್ರೀಡಾಕೂಟದ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್‌ ಪಂದ್ಯದಲ್ಲಿ ಪತ್ರಕರ್ತರು ಮಿಂಚು ಹರಿಸಿದರು.

ಮೊದಲು ಬ್ಯಾಟ್‌ ಮಾಡಿದ ಪೊಲೀಸರು ನಿಗದಿತ 8 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 72 ರನ್‌ ಗಳಿಸಿದರು. ಪತ್ರಕರ್ತರ ತಂಡದವರು 6.1 ಓವರ್‌ಗಳಲ್ಲಿ ಕೇವಲ 2ವಿಕೆಟ್‌ ನಷ್ಟಕ್ಕೆ ಗುರಿ ಮುಟ್ಟಿದರು.

ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕಿರಣ್‌ ಹಾಗೂ ರಘುರಾಜ್‌ ಉತ್ತಮ ಆರಂಭ ನೀಡಿದರು. ಸಿಕ್ಸರ್‌ಗಳ ಮೂಲಕ ಪೊಲೀಸರ ಬೆವರಿಳಿಸಿದರು. ನಂತರ ನಾಯಕ ಸುರೇಶ್‌ ಕುಮಾರ್‌ ಹಾಗೂ ಸಮೀರ್‌ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬೌಲಿಂಗ್‌ನಲ್ಲೂ ಪತ್ರಕರ್ತರು ಉತ್ತಮ ಪ್ರದರ್ಶನ ನೀಡಿದರು. ದೀಪಕ್‌ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ ಪಡೆದರು ಮಿಂಚಿದರು. ಮುದುವಾಣಿ ವೇಣು, ಮಹೇಶ್‌, ಕಿರಣ್‌, ಸುನಿಲ್‌ ಕೂಡ ಗಮನ ಸೆಳೆದರು. ರವಿಕುಮಾರ್‌ ಉತ್ತಮ ಕ್ಯಾಚ್‌ ಪಡೆದರು. ತಂಡದಲ್ಲಿ ರವಿಕುಮಾರ್‌, ಗಂಗಾಧರ್‌, ರವಿ, ಓಂಕಾರ ಮೂರ್ತಿ ಇದ್ದರು.

ಪೊಲೀಸರು, ಸಿಬ್ಬಂದಿ ವರ್ಗದವರು ಸ್ಥಳದಲ್ಲಿದ್ದು ಆಟಗಾರರಿಗೆ ಹುರುಪು ತುಂಬಿದರು. ತಮ್ಮ ತಂಡದ ಆಟಗಾರರು ಸಿಕ್ಸರ್‌, ಬೌಂಡರಿ ಗಳಿಸಿದ ಚಪ್ಪಾಳೆ ತಟ್ಟಿ ಸ್ಫೂರ್ತಿ ತುಂಬಿದರು. ಆದರೆ, ಕಳೆದ ವರ್ಷ ಪೊಲೀಸರ ಎದುರು ಸೋತಿದ್ದ ಪತ್ರಕರ್ತರು ಈ ಬಾರಿ ಗೆಲ್ಲುವ ಮೂಲಕ ತಿರುಗೇಟು ನೀಡಿದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

13 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago