ಕೋಲಾರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸಾರಥ್ಯದ ಜಿಲ್ಲಾ ಪೊಲೀಸ್ ತಂಡದ ವಿರುದ್ಧ ಎ.ಜಿ.ಸುರೇಶ್ ಕುಮಾರ್ ನೇತೃತ್ವದ ಪತ್ರಕರ್ತರು ಎಂಟು ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದರು.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಕ್ರೀಡಾಕೂಟದ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್ ಪಂದ್ಯದಲ್ಲಿ ಪತ್ರಕರ್ತರು ಮಿಂಚು ಹರಿಸಿದರು.
ಮೊದಲು ಬ್ಯಾಟ್ ಮಾಡಿದ ಪೊಲೀಸರು ನಿಗದಿತ 8 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 72 ರನ್ ಗಳಿಸಿದರು. ಪತ್ರಕರ್ತರ ತಂಡದವರು 6.1 ಓವರ್ಗಳಲ್ಲಿ ಕೇವಲ 2ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿದರು.
ಆರಂಭಿಕ ಬ್ಯಾಟ್ಸ್ಮನ್ಗಳಾದ ಕಿರಣ್ ಹಾಗೂ ರಘುರಾಜ್ ಉತ್ತಮ ಆರಂಭ ನೀಡಿದರು. ಸಿಕ್ಸರ್ಗಳ ಮೂಲಕ ಪೊಲೀಸರ ಬೆವರಿಳಿಸಿದರು. ನಂತರ ನಾಯಕ ಸುರೇಶ್ ಕುಮಾರ್ ಹಾಗೂ ಸಮೀರ್ ತಂಡವನ್ನು ಗೆಲುವಿನ ದಡ ಸೇರಿಸಿದರು.
ಬೌಲಿಂಗ್ನಲ್ಲೂ ಪತ್ರಕರ್ತರು ಉತ್ತಮ ಪ್ರದರ್ಶನ ನೀಡಿದರು. ದೀಪಕ್ ಎರಡು ಓವರ್ಗಳಲ್ಲಿ ಮೂರು ವಿಕೆಟ್ ಪಡೆದರು ಮಿಂಚಿದರು. ಮುದುವಾಣಿ ವೇಣು, ಮಹೇಶ್, ಕಿರಣ್, ಸುನಿಲ್ ಕೂಡ ಗಮನ ಸೆಳೆದರು. ರವಿಕುಮಾರ್ ಉತ್ತಮ ಕ್ಯಾಚ್ ಪಡೆದರು. ತಂಡದಲ್ಲಿ ರವಿಕುಮಾರ್, ಗಂಗಾಧರ್, ರವಿ, ಓಂಕಾರ ಮೂರ್ತಿ ಇದ್ದರು.
ಪೊಲೀಸರು, ಸಿಬ್ಬಂದಿ ವರ್ಗದವರು ಸ್ಥಳದಲ್ಲಿದ್ದು ಆಟಗಾರರಿಗೆ ಹುರುಪು ತುಂಬಿದರು. ತಮ್ಮ ತಂಡದ ಆಟಗಾರರು ಸಿಕ್ಸರ್, ಬೌಂಡರಿ ಗಳಿಸಿದ ಚಪ್ಪಾಳೆ ತಟ್ಟಿ ಸ್ಫೂರ್ತಿ ತುಂಬಿದರು. ಆದರೆ, ಕಳೆದ ವರ್ಷ ಪೊಲೀಸರ ಎದುರು ಸೋತಿದ್ದ ಪತ್ರಕರ್ತರು ಈ ಬಾರಿ ಗೆಲ್ಲುವ ಮೂಲಕ ತಿರುಗೇಟು ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…