Categories: ಕೋಲಾರ

ಕ್ರಿಕೆಟ್ ಪಂದ್ಯಾವಳಿ: ಪೊಲೀಸರನ್ನು ಮಣಿಸಿದ ಪತ್ರಕರ್ತರು

ಕೋಲಾರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಸಾರಥ್ಯದ ಜಿಲ್ಲಾ ಪೊಲೀಸ್‌ ತಂಡದ ವಿರುದ್ಧ ಎ.ಜಿ.ಸುರೇಶ್‌ ಕುಮಾರ್‌ ನೇತೃತ್ವದ ಪತ್ರಕರ್ತರು ಎಂಟು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್‌ ಕ್ರೀಡಾಕೂಟದ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್‌ ಪಂದ್ಯದಲ್ಲಿ ಪತ್ರಕರ್ತರು ಮಿಂಚು ಹರಿಸಿದರು.

ಮೊದಲು ಬ್ಯಾಟ್‌ ಮಾಡಿದ ಪೊಲೀಸರು ನಿಗದಿತ 8 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 72 ರನ್‌ ಗಳಿಸಿದರು. ಪತ್ರಕರ್ತರ ತಂಡದವರು 6.1 ಓವರ್‌ಗಳಲ್ಲಿ ಕೇವಲ 2ವಿಕೆಟ್‌ ನಷ್ಟಕ್ಕೆ ಗುರಿ ಮುಟ್ಟಿದರು.

ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕಿರಣ್‌ ಹಾಗೂ ರಘುರಾಜ್‌ ಉತ್ತಮ ಆರಂಭ ನೀಡಿದರು. ಸಿಕ್ಸರ್‌ಗಳ ಮೂಲಕ ಪೊಲೀಸರ ಬೆವರಿಳಿಸಿದರು. ನಂತರ ನಾಯಕ ಸುರೇಶ್‌ ಕುಮಾರ್‌ ಹಾಗೂ ಸಮೀರ್‌ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬೌಲಿಂಗ್‌ನಲ್ಲೂ ಪತ್ರಕರ್ತರು ಉತ್ತಮ ಪ್ರದರ್ಶನ ನೀಡಿದರು. ದೀಪಕ್‌ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ ಪಡೆದರು ಮಿಂಚಿದರು. ಮುದುವಾಣಿ ವೇಣು, ಮಹೇಶ್‌, ಕಿರಣ್‌, ಸುನಿಲ್‌ ಕೂಡ ಗಮನ ಸೆಳೆದರು. ರವಿಕುಮಾರ್‌ ಉತ್ತಮ ಕ್ಯಾಚ್‌ ಪಡೆದರು. ತಂಡದಲ್ಲಿ ರವಿಕುಮಾರ್‌, ಗಂಗಾಧರ್‌, ರವಿ, ಓಂಕಾರ ಮೂರ್ತಿ ಇದ್ದರು.

ಪೊಲೀಸರು, ಸಿಬ್ಬಂದಿ ವರ್ಗದವರು ಸ್ಥಳದಲ್ಲಿದ್ದು ಆಟಗಾರರಿಗೆ ಹುರುಪು ತುಂಬಿದರು. ತಮ್ಮ ತಂಡದ ಆಟಗಾರರು ಸಿಕ್ಸರ್‌, ಬೌಂಡರಿ ಗಳಿಸಿದ ಚಪ್ಪಾಳೆ ತಟ್ಟಿ ಸ್ಫೂರ್ತಿ ತುಂಬಿದರು. ಆದರೆ, ಕಳೆದ ವರ್ಷ ಪೊಲೀಸರ ಎದುರು ಸೋತಿದ್ದ ಪತ್ರಕರ್ತರು ಈ ಬಾರಿ ಗೆಲ್ಲುವ ಮೂಲಕ ತಿರುಗೇಟು ನೀಡಿದರು.

Ramesh Babu

Journalist

Recent Posts

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

5 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

12 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago