ಕ್ರಿಕೆಟ್ ಬೆಟ್ಟಿಂಗ್, ಶೋಕಿಗಾಗಿ ಒಂಟಿ ಮನೆಗಳಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 90 ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸಲಾಗಿದೆ…
ಶ್ರೀರಂಗಪಟ್ಟಣ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧನ ಮಾಡಲಾಗಿದೆ….
ಈ ಕಿರಾತಕರು ಒಂಟಿ ಮನೆ ಟಾರ್ಗೆಟ್ ಮಾಡಿ ದರೋಡೆ ಮಾಡ್ತಿದ್ದರು. ನವೆಂಬರ್ 6ರಂದು ಕೂಡಲಕುಪ್ಪೆ ಗ್ರಾಮದ ಮೀನಾಕ್ಷಿ ಹಾಗೂ ಪಕ್ಕದ ಸುವರ್ಣ ಎಂಬುವರ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದರು. ಜೊತೆಗೆ ಮತ್ತೊಂದು ಮನೆಯಲ್ಲೂ ರಾಬರಿ ಕೂಡ ಮಾಡಿದ್ದರು.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಪತ್ತೆಗಾಗಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಎರಡು ತಂಡಗಳ ರಚನೆ ಮಾಡಲಾಗಿತ್ತು. ಪ್ರಕರಣದಲ್ಲಿ 6 ಜನ ಆರೋಪಿತರಲ್ಲಿ 5 ಜನ ಆರೋಪಿಗಳ ದಸ್ತಗಿರಿ ಮಾಡಲಾಗಿದೆ.
ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದ ಗಂಗರಾಜು@ಗಂಗ (56) ಬಂಧಿತ ಪ್ರಮುಖ ಆರೋಪಿ. ಉಳಿದಂತೆ ರಾಮನಗರ ಟೌನ್ ನ ಮಂಜುನಾಥ್ @ಕೆಂಪ(25), ಶಶಿಕುಮಾರ್@ಗೆಂಡೆ(25), ಕೃಷ್ಣ@ರಾಜು(25), ಮದ್ದೂರು ಟೌನ್ ನ ಸಂದೇಶ್@ಕಲರ್(27) ಬಂಧಿತರು.
ಗಂಗರಾಜು@ಗಂಗ ಎಂಬ ಪ್ರಮುಖ ಆರೋಪಿ ಒಂಟಿ ಮನೆ ದರೋಡೆ ಸೇರಿ ಬರೋಬ್ಬರಿ 90 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಎಲ್ಲಾ ಆರೋಪಿಗಳು ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಸಾಲ ಮಾಡಿಕೊಂಡಿದ್ದರು.
ಸಾಲ ತೀರಿಸಲು ಕಳ್ಳತನಕ್ಕೆ ಇಳಿದಿದ್ದ ಗ್ಯಾಂಗ್. ಸಂದೇಶ್ ಎಂಬ ಆರೋಪಿ ಹೆಣ್ಣು ಮಕ್ಕಳು ಇರ್ತಿದ್ದ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಗುರುತಿಸುತ್ತಿದ್ದ. ನಂತರ ಪ್ಲಾನ್ ಮಾಡಿ ಒಂಟಿ ಮನೆ ದರೋಡೆ ಮಾಡ್ತಿದ್ದ ಖತರ್ನಾಕ್ ಗಳು.
ಬಂಧಿತರಿಂದ 5.5 ಲಕ್ಷ ಮೌಲ್ಯದ 55 ಗ್ರಾಂ ಚಿನ್ನಾಭರಣ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಶ್ಲಾಘನೆ ಮಾಡಿದ್ದಾರೆ.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…