ಕ್ರಿಕೆಟ್ ಬೆಟ್ಟಿಂಗ್, ಶೋಕಿಗಾಗಿ ಒಂಟಿ ಮನೆಗಳಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 90 ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸಲಾಗಿದೆ…
ಶ್ರೀರಂಗಪಟ್ಟಣ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧನ ಮಾಡಲಾಗಿದೆ….
ಈ ಕಿರಾತಕರು ಒಂಟಿ ಮನೆ ಟಾರ್ಗೆಟ್ ಮಾಡಿ ದರೋಡೆ ಮಾಡ್ತಿದ್ದರು. ನವೆಂಬರ್ 6ರಂದು ಕೂಡಲಕುಪ್ಪೆ ಗ್ರಾಮದ ಮೀನಾಕ್ಷಿ ಹಾಗೂ ಪಕ್ಕದ ಸುವರ್ಣ ಎಂಬುವರ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದರು. ಜೊತೆಗೆ ಮತ್ತೊಂದು ಮನೆಯಲ್ಲೂ ರಾಬರಿ ಕೂಡ ಮಾಡಿದ್ದರು.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಪತ್ತೆಗಾಗಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಎರಡು ತಂಡಗಳ ರಚನೆ ಮಾಡಲಾಗಿತ್ತು. ಪ್ರಕರಣದಲ್ಲಿ 6 ಜನ ಆರೋಪಿತರಲ್ಲಿ 5 ಜನ ಆರೋಪಿಗಳ ದಸ್ತಗಿರಿ ಮಾಡಲಾಗಿದೆ.
ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದ ಗಂಗರಾಜು@ಗಂಗ (56) ಬಂಧಿತ ಪ್ರಮುಖ ಆರೋಪಿ. ಉಳಿದಂತೆ ರಾಮನಗರ ಟೌನ್ ನ ಮಂಜುನಾಥ್ @ಕೆಂಪ(25), ಶಶಿಕುಮಾರ್@ಗೆಂಡೆ(25), ಕೃಷ್ಣ@ರಾಜು(25), ಮದ್ದೂರು ಟೌನ್ ನ ಸಂದೇಶ್@ಕಲರ್(27) ಬಂಧಿತರು.
ಗಂಗರಾಜು@ಗಂಗ ಎಂಬ ಪ್ರಮುಖ ಆರೋಪಿ ಒಂಟಿ ಮನೆ ದರೋಡೆ ಸೇರಿ ಬರೋಬ್ಬರಿ 90 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಎಲ್ಲಾ ಆರೋಪಿಗಳು ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಸಾಲ ಮಾಡಿಕೊಂಡಿದ್ದರು.
ಸಾಲ ತೀರಿಸಲು ಕಳ್ಳತನಕ್ಕೆ ಇಳಿದಿದ್ದ ಗ್ಯಾಂಗ್. ಸಂದೇಶ್ ಎಂಬ ಆರೋಪಿ ಹೆಣ್ಣು ಮಕ್ಕಳು ಇರ್ತಿದ್ದ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಗುರುತಿಸುತ್ತಿದ್ದ. ನಂತರ ಪ್ಲಾನ್ ಮಾಡಿ ಒಂಟಿ ಮನೆ ದರೋಡೆ ಮಾಡ್ತಿದ್ದ ಖತರ್ನಾಕ್ ಗಳು.
ಬಂಧಿತರಿಂದ 5.5 ಲಕ್ಷ ಮೌಲ್ಯದ 55 ಗ್ರಾಂ ಚಿನ್ನಾಭರಣ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಶ್ಲಾಘನೆ ಮಾಡಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…