ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್ ಇನ್ನಿಲ್ಲ

ವ್ಯಾಟಿಕನ್ ಸಿಟಿ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್‌ (88) ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.

ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್‌ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ಜಗತ್ತಿನಾದ್ಯಂತ 1.4 ಶತಕೋಟಿ ಜನರಿಗೆ ಆಧ್ಯಾತ್ಮಿಕ ಧರ್ಮಗುರುವಾಗಿದ್ದರು. 2013ರಿಂದ ಪೋಪ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕಳೆದ ವರ್ಷ ಪೋಪ್​​ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ

ಕಳೆದ ವರ್ಷ ಜೂನ್‌ನಲ್ಲಿ, ಪ್ರಧಾನಿಯವರು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಹೋಗಿದ್ದಾಗ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಭಾರತಕ್ಕೆ ಬನ್ನಿ ಎಂದು ಪೋಪ್ ಅವರಿಗೆ ಮೋದಿ ಆಹ್ವಾನ ನೀಡಿದ್ದರು. ಪೋಪ್ ಅವರೊಂದಿಗೆ ಪ್ರಧಾನಿ ಮೋದಿ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದರು. ಆ ಸಮಯದಲ್ಲಿ ವಿಶ್ವದ ಅತಿದೊಡ್ಡ ಬಿಕ್ಕಟ್ಟಾದ ಕೊರೊನಾ ಬಗ್ಗೆಯೂ ಉಭಯರೂ ಸುದೀರ್ಘ ಮಾತುಕತೆ ನಡೆಸಿದ್ದರು.

Ramesh Babu

Journalist

Recent Posts

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

50 seconds ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

1 hour ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

1 hour ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

5 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

13 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

1 day ago