ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್ ಇನ್ನಿಲ್ಲ

ವ್ಯಾಟಿಕನ್ ಸಿಟಿ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್‌ (88) ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.

ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್‌ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ಜಗತ್ತಿನಾದ್ಯಂತ 1.4 ಶತಕೋಟಿ ಜನರಿಗೆ ಆಧ್ಯಾತ್ಮಿಕ ಧರ್ಮಗುರುವಾಗಿದ್ದರು. 2013ರಿಂದ ಪೋಪ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕಳೆದ ವರ್ಷ ಪೋಪ್​​ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ

ಕಳೆದ ವರ್ಷ ಜೂನ್‌ನಲ್ಲಿ, ಪ್ರಧಾನಿಯವರು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಹೋಗಿದ್ದಾಗ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಭಾರತಕ್ಕೆ ಬನ್ನಿ ಎಂದು ಪೋಪ್ ಅವರಿಗೆ ಮೋದಿ ಆಹ್ವಾನ ನೀಡಿದ್ದರು. ಪೋಪ್ ಅವರೊಂದಿಗೆ ಪ್ರಧಾನಿ ಮೋದಿ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದರು. ಆ ಸಮಯದಲ್ಲಿ ವಿಶ್ವದ ಅತಿದೊಡ್ಡ ಬಿಕ್ಕಟ್ಟಾದ ಕೊರೊನಾ ಬಗ್ಗೆಯೂ ಉಭಯರೂ ಸುದೀರ್ಘ ಮಾತುಕತೆ ನಡೆಸಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

49 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago