ವ್ಯಾಟಿಕನ್ ಸಿಟಿ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರಿಶ್ಚಿಯನ್ ಜಾಗತಿಕ ಧರ್ಮಗುರು ಪೋಪ್ ಫ್ರಾನ್ಸಿಸ್ (88) ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಜಗತ್ತಿನಾದ್ಯಂತ 1.4 ಶತಕೋಟಿ ಜನರಿಗೆ ಆಧ್ಯಾತ್ಮಿಕ ಧರ್ಮಗುರುವಾಗಿದ್ದರು. 2013ರಿಂದ ಪೋಪ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ವರ್ಷ ಪೋಪ್ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ
ಕಳೆದ ವರ್ಷ ಜೂನ್ನಲ್ಲಿ, ಪ್ರಧಾನಿಯವರು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಹೋಗಿದ್ದಾಗ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಭಾರತಕ್ಕೆ ಬನ್ನಿ ಎಂದು ಪೋಪ್ ಅವರಿಗೆ ಮೋದಿ ಆಹ್ವಾನ ನೀಡಿದ್ದರು. ಪೋಪ್ ಅವರೊಂದಿಗೆ ಪ್ರಧಾನಿ ಮೋದಿ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದರು. ಆ ಸಮಯದಲ್ಲಿ ವಿಶ್ವದ ಅತಿದೊಡ್ಡ ಬಿಕ್ಕಟ್ಟಾದ ಕೊರೊನಾ ಬಗ್ಗೆಯೂ ಉಭಯರೂ ಸುದೀರ್ಘ ಮಾತುಕತೆ ನಡೆಸಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…