ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.
ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…