ಕ್ರಿ.ಶ. 8-9ನೇ ಶತಮಾನದ ಮಾಡೇಶ್ವರದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ರಕ್ಷಿಸುವಂತೆ ಡಿಸಿಗೆ ಮನವಿ

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ‌ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.

ಇಂತಹ ಐತಿಹಾಸಿಕ ಮಹತ್ವವುಳ್ಳ, ಹುಲುಕುಡಿ ಬೆಟ್ಟಕ್ಕೆ ಹೊಂದಿಕೊಂಡಿರುವ, ಈ ಪುರಾತನ ದೇವಾಲಯದ ಬಳಿ ಇಂದು ಆಧುನಿಕ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದಲ್ಲದೆ, ದೇವಾಲಯದ ಅವಶೇಷಗಳನ್ನು ಧ್ವಂಸ ಮಾಡಿ, ದೇವಾಲಯಕ್ಕೆ ಸೇರಿದ ಸ್ಥಳದಲ್ಲಿ ಕಾಂಪೌಂಡ್ ಕಟ್ಟಲು ಮುಂದಾಗಿರುವುದು ಕಂಡು ಬಂದಿರುತ್ತದೆ. ಇದು ನಿಜಕ್ಕೂ ಅನಧಿಕೃತ ಕಾರ್ಯವಾಗಿದ್ದು, ಐತಿಹಾಸಿಕ ಅವಶೇಷಗಳ ಸಂರಕ್ಷಣಾ ಕಾಯ್ದೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅಲ್ಲದೆ ಪುರಾತನ ದೇವಾಲಯದಿಂದ ನೂರು ಮೀಟರ್ ಒಳಗೆ ಯಾವುದೇ ಆಧುನಿಕ ಕಟ್ಟಡ ಕಾಮಗಾರಿಗಳನ್ನು ಪುರಾತತ್ವ ಇಲಾಖೆಯ ಅನುಮತಿಯಿಲ್ಲದೆ ನಡೆಸುವಂತಿಲ್ಲ.

ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

5 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

5 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

5 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

5 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

9 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

12 hours ago