ಕ್ರಿ.ಶ. 8-9ನೇ ಶತಮಾನದ ಮಾಡೇಶ್ವರದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ರಕ್ಷಿಸುವಂತೆ ಡಿಸಿಗೆ ಮನವಿ

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ‌ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.

ಇಂತಹ ಐತಿಹಾಸಿಕ ಮಹತ್ವವುಳ್ಳ, ಹುಲುಕುಡಿ ಬೆಟ್ಟಕ್ಕೆ ಹೊಂದಿಕೊಂಡಿರುವ, ಈ ಪುರಾತನ ದೇವಾಲಯದ ಬಳಿ ಇಂದು ಆಧುನಿಕ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದಲ್ಲದೆ, ದೇವಾಲಯದ ಅವಶೇಷಗಳನ್ನು ಧ್ವಂಸ ಮಾಡಿ, ದೇವಾಲಯಕ್ಕೆ ಸೇರಿದ ಸ್ಥಳದಲ್ಲಿ ಕಾಂಪೌಂಡ್ ಕಟ್ಟಲು ಮುಂದಾಗಿರುವುದು ಕಂಡು ಬಂದಿರುತ್ತದೆ. ಇದು ನಿಜಕ್ಕೂ ಅನಧಿಕೃತ ಕಾರ್ಯವಾಗಿದ್ದು, ಐತಿಹಾಸಿಕ ಅವಶೇಷಗಳ ಸಂರಕ್ಷಣಾ ಕಾಯ್ದೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅಲ್ಲದೆ ಪುರಾತನ ದೇವಾಲಯದಿಂದ ನೂರು ಮೀಟರ್ ಒಳಗೆ ಯಾವುದೇ ಆಧುನಿಕ ಕಟ್ಟಡ ಕಾಮಗಾರಿಗಳನ್ನು ಪುರಾತತ್ವ ಇಲಾಖೆಯ ಅನುಮತಿಯಿಲ್ಲದೆ ನಡೆಸುವಂತಿಲ್ಲ.

ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago