ಕ್ರಿ.ಶ. 8-9ನೇ ಶತಮಾನದ ಮಾಡೇಶ್ವರದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ರಕ್ಷಿಸುವಂತೆ ಡಿಸಿಗೆ ಮನವಿ

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ‌ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.

ಇಂತಹ ಐತಿಹಾಸಿಕ ಮಹತ್ವವುಳ್ಳ, ಹುಲುಕುಡಿ ಬೆಟ್ಟಕ್ಕೆ ಹೊಂದಿಕೊಂಡಿರುವ, ಈ ಪುರಾತನ ದೇವಾಲಯದ ಬಳಿ ಇಂದು ಆಧುನಿಕ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದಲ್ಲದೆ, ದೇವಾಲಯದ ಅವಶೇಷಗಳನ್ನು ಧ್ವಂಸ ಮಾಡಿ, ದೇವಾಲಯಕ್ಕೆ ಸೇರಿದ ಸ್ಥಳದಲ್ಲಿ ಕಾಂಪೌಂಡ್ ಕಟ್ಟಲು ಮುಂದಾಗಿರುವುದು ಕಂಡು ಬಂದಿರುತ್ತದೆ. ಇದು ನಿಜಕ್ಕೂ ಅನಧಿಕೃತ ಕಾರ್ಯವಾಗಿದ್ದು, ಐತಿಹಾಸಿಕ ಅವಶೇಷಗಳ ಸಂರಕ್ಷಣಾ ಕಾಯ್ದೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅಲ್ಲದೆ ಪುರಾತನ ದೇವಾಲಯದಿಂದ ನೂರು ಮೀಟರ್ ಒಳಗೆ ಯಾವುದೇ ಆಧುನಿಕ ಕಟ್ಟಡ ಕಾಮಗಾರಿಗಳನ್ನು ಪುರಾತತ್ವ ಇಲಾಖೆಯ ಅನುಮತಿಯಿಲ್ಲದೆ ನಡೆಸುವಂತಿಲ್ಲ.

ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago