ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.
ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…