ಕ್ರಿ.ಶ. 8-9ನೇ ಶತಮಾನದ ಮಾಡೇಶ್ವರದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ರಕ್ಷಿಸುವಂತೆ ಡಿಸಿಗೆ ಮನವಿ

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ‌ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.

ಇಂತಹ ಐತಿಹಾಸಿಕ ಮಹತ್ವವುಳ್ಳ, ಹುಲುಕುಡಿ ಬೆಟ್ಟಕ್ಕೆ ಹೊಂದಿಕೊಂಡಿರುವ, ಈ ಪುರಾತನ ದೇವಾಲಯದ ಬಳಿ ಇಂದು ಆಧುನಿಕ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದಲ್ಲದೆ, ದೇವಾಲಯದ ಅವಶೇಷಗಳನ್ನು ಧ್ವಂಸ ಮಾಡಿ, ದೇವಾಲಯಕ್ಕೆ ಸೇರಿದ ಸ್ಥಳದಲ್ಲಿ ಕಾಂಪೌಂಡ್ ಕಟ್ಟಲು ಮುಂದಾಗಿರುವುದು ಕಂಡು ಬಂದಿರುತ್ತದೆ. ಇದು ನಿಜಕ್ಕೂ ಅನಧಿಕೃತ ಕಾರ್ಯವಾಗಿದ್ದು, ಐತಿಹಾಸಿಕ ಅವಶೇಷಗಳ ಸಂರಕ್ಷಣಾ ಕಾಯ್ದೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅಲ್ಲದೆ ಪುರಾತನ ದೇವಾಲಯದಿಂದ ನೂರು ಮೀಟರ್ ಒಳಗೆ ಯಾವುದೇ ಆಧುನಿಕ ಕಟ್ಟಡ ಕಾಮಗಾರಿಗಳನ್ನು ಪುರಾತತ್ವ ಇಲಾಖೆಯ ಅನುಮತಿಯಿಲ್ಲದೆ ನಡೆಸುವಂತಿಲ್ಲ.

ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

13 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

23 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

23 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago