ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.
ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…