ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಶಾಲಾ ಆವರಣದಲ್ಲಿ ನಿರ್ಮಿಸಿರುವ ಬಾಕ್ಸಿಂಗ್ ರಿಂಗ್, ಕುಸ್ತಿ ಅಂಕಣ, ಜೂಡೋ ತರಬೇತಿ ವ್ಯವಸ್ಥೆ, ಕಬ್ಬಡಿ ಅಂಕಣ, ಶಟಲ್ ಬ್ಯಾಡ್ಮಿಂಟನ್ ಅಂಕಣ, ಸ್ಕೇಟಿಂಗ್ ಅಂಕಣ ಹಾಗೂ ಪಂಚಿಂಗ್ ಬ್ಯಾಗ್ ಸೇರಿದಂತೆ ವಿವಿಧ ಕ್ರೀಡಾ ಸೌಲಭ್ಯಗಳನ್ನು ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯ ಮೂಲಕ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ, ದೈಹಿಕ ಸಾಮರ್ಥ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಹೇಳಿದರು.
ಒಂದೇ ಆವರಣದಲ್ಲಿ ಹಲವು ಕ್ರೀಡೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಅನುಕೂಲವಾಗಲಿದೆ. ವಿಶೇಷವಾಗಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಸ್ಕೇಟಿಂಗ್ ಹಾಗೂ ಬ್ಯಾಡ್ಮಿಂಟನ್ನಲ್ಲಿ ಆಸಕ್ತಿ ಹೊಂದಿರುವವರಿಗೆ ಇದು ಉತ್ತಮ ವೇದಿಕೆಯಾಗಲಿದೆ.
ಶಾಲಾ ವಿದ್ಯಾರ್ಥಿಗಳಷ್ಟೇ ಅಲ್ಲದೆ, ದೊಡ್ಡಬಳ್ಳಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕ್ರೀಡಾಸಕ್ತ ವಿದ್ಯಾರ್ಥಿಗಳಿಗೂ ಈ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶವನ್ನು ಶಾಲಾ ಆಡಳಿತ ಹೊಂದಿದೆ.
ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳನ್ನು ರೂಪಿಸುವ ಗುರಿಯನ್ನು ನ್ಯಾಷನಲ್ ಪ್ರೈಡ್ ಶಾಲೆ ಹೊಂದಿದೆ. ಶಾಲೆಯ ಈ ಪ್ರಯತ್ನಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…